ಹೊಸದಿಲ್ಲಿ: ಹಬ್ಬವನ್ನು ದೇಶದ್ಯಾಂತ ಬಹಳಷ್ಟು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಈ ಮಧ್ಯೆ ಯುವ ಆಟಗಾರ , ಟೀಮ್ ಇಂಡಿಯಾ ಮಾಜಿ ನಾಯಕ ಜತೆಗೆ ಕ್ರಿಸ್ಮಸ್ ಹಬ್ಬವನ್ನು ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ಸ್ವತ: ರಿಷಬ್ ಪಂತ್ ಅವರೇ ಈ ಚಿತ್ರವನ್ನು ಅಭಿಮಾನಿಗಳ ಜತೆಗೆ ಹಂಚಿದ್ದಾರೆ. ಅಲ್ಲದೆ ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಏಕದಿನ ವಿಶ್ವಕಪ್ ಬಳಿಕ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ರಂಗದಿಂದ ದೂರವುಳಿದಿದ್ದಾರೆ. ಇನ್ನೊಂದೆಡೆ ತಮ್ಮ ಫೇವರಿಟ್ ಆಟಗಾರನೊಂದಿಗೆ ಪಂತ್ ಅಮೂಲ್ಯ ಸಲಹೆಯನ್ನು ಕಳೆಯುವ ಮೂಲಕ ಪ್ರೀತಿಗೆ ಪಾತ್ರವಾಗಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಸ್ಥಾನವನ್ನು ಸಮರ್ಥವಾಗಿ ತುಂಬಿಕೊಳ್ಳಲು ರಿಷಬ್ ಪಂತ್ ವಿಫಲವಾಗಿದ್ದರು. ಇತ್ತೀಚೆಗಷ್ಟೇ ಅಂತ್ಯಗೊಂಡ ವೆಸ್ಟ್ಇಂಡೀಸ್ ವಿರುದ್ಧದ ಸರಣಿಯಲ್ಲಿ ವಿಕೆಟ್ ಕೀಪಿಂಗ್ನಲ್ಲೂ ವೈಫಲ್ಯ ಅನುಭವಿಸಿದ್ದರು. ಇದು ಅಭಿಮಾನಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರತಿ ಬಾರಿಯೂ ಎಡವಟ್ಟು ಮಾಡಿದಾಗ ರಿಷಬ್ ಪಂತ್ರನ್ನು ಟ್ರೋಲ್ಗೆ ಗುರಿಯಾಗಿರಿಸಲಾಗುತ್ತದೆ. ತೀವ್ರ ಒತ್ತಡದಲ್ಲಿರುವ ಪಂತ್, ತಮ್ಮ ಶ್ರೇಷ್ಠ ಪ್ರದರ್ಶನ ಹೊರಗೆಡುವುದರಲ್ಲಿ ವಿಫಲವಾಗುತ್ತಿದ್ದಾರೆ. ಇನ್ನೊಂದೆಡೆ ಮುಂದಿನ ವರ್ಷ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ ಹಿನ್ನಲೆಯಲ್ಲಿ ಮಹೇಂದ್ರ ಸಿಂಗ್ ಧೋನಿ ಭಾಗವಹಿಸುವರೇ ಎಂಬುದು ಬಹಳಷ್ಟು ಕುತೂಹಲವೆನಿಸಿದೆ. ಈ ಹಿನ್ನಲೆಯಲ್ಲಿ ಮುಂದಿನ ವರ್ಷ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ ಟ್ವೆಂಟಿ-20 ಕ್ರಿಕೆಟ್ ಅತ್ಯಂತ ನಿರ್ಣಾಯಕವೆನಿಸಲಿದೆ. ಒಟ್ಟಾರೆಯಾಗಿ ಅತೀವ ಒತ್ತಡದಲ್ಲಿರುವ ರಿಷಬ್ ಪಂತ್ ತಮ್ಮ ಮೆಚ್ಚಿನ ಆಟಗಾರನ ಜತೆಗೆ ಅಮೂಲ್ಯ ಸಮಯವನ್ನು ಕಳೆಯುವ ಮೂಲಕ ಗಮನ ಸೆಳೆದಿದ್ದಾರೆ. ಅಲ್ಲದೆ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್ ಬಗ್ಗೆ ಅಮೂಲ್ಯ ಸಲಹೆಗಳನ್ನು ಪಡೆಯಲಾಗಿದೆ ಎಂದು ಅಂದಾಜಿಸಲಾಗಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2MtTEIu