ರೋಷನ್‌ ಬೇಗ್‌ ಈ ಕಾಲದ ಮೀರ್‌ ಸಾದಿಕ್‌: ಸಿದ್ದರಾಮಯ್ಯ

ಬೆಂಗಳೂರು: ಟಿಪ್ಪು ಸುಲ್ತಾನ್‌ ಮುಸ್ಲಿಂ ಕುಟುಂಬದಲ್ಲಿ ಹುಟ್ಟಿದರೂ ಅವರೊಬ್ಬ ದೇಶ ಮೆಚ್ಚುವ ಸ್ವಾತಂತ್ರ್ಯ ಹೋರಾಟಗಾರ. ಅದೇ ಟಿಪ್ಪುವಿನ ಆಸ್ಥಾನದಲ್ಲಿ ಮೀರ್‌ ಸಾದಿಕ್‌ ಎಂಬ ರಾಜದ್ರೋಹಿ, ಮಿತ್ರದ್ರೋಹಿ ಇದ್ದ. ಒಬ್ಬ ಈ ಕಾಲದ ಮೀರ್‌ ಸಾದಿಕ್‌. ಇಂತಹ ಮೀರ್‌ ಸಾದಿಕ್‌ಗಳನ್ನು ರಾಜಕೀಯದಲ್ಲಿ ತಲೆ ಎತ್ತಲು ಬಿಡಬಾರದು ಎಂದು ಕಾಂಗ್ರೆಸ್‌ ನಾಯಕ ಕಿಡಿ ಕಾರಿದ್ದಾರೆ. ಶಿವಾಜಿನಗರ ವಿಧಾನಸಭೆ ಕ್ಷೇತ್ರದ ಚುನಾವಣಾ ಪ್ರಚಾರ ವೇಳೆಯಲ್ಲಿ ಸಿದ್ದರಾಮಯ್ಯ ಅವರು ಹಲಸೂರಿನಲ್ಲಿರುವ ತಿರುವಳ್ಳುವರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವಿಸಿದರು. ತಿರುವಳ್ಳುವರ್‌ ಅವರು ತಮ್ಮ ಬರಹಗಳಲ್ಲಿ ಮಾನವೀಯ ಮೌಲ್ಯಗಳಿಗೆ ವಿಶೇಷ ಮಹತ್ವ ನೀಡಿ, ಸಾಮಾಜಿಕ ಸುಧಾರಣೆಗೆ ಶ್ರಮಿಸಿದ್ದರು. ಅವರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದರು. ಮುಸ್ಲಿಮರಿಗೆ ಚುನಾವಣೆಯಲ್ಲಿ ಟಿಕೆಟ್‌ ಕೊಡಬೇಕಾದರೆ ಅವರು 10 ವರ್ಷ ಬಿಜೆಪಿ ಕಚೇರಿಯಲ್ಲಿ ಕಸ ಹೊಡೆಯಬೇಕು ಎಂದು ಈಶ್ವರಪ್ಪ ವಿಧಾನ ಪರಿಷತ್‌ನಲ್ಲಿ ಹೇಳಿದ್ದರು. ಈ ಕಾರಣಕ್ಕಾಗಿಯೇ ರೋಷನ್‌ ಬೇಗ್‌ಗೆ ಟಿಕೆಟ್‌ ಕೊಟ್ಟಿಲ್ಲ. ಅವರು ಕಸಗುಡಿಸಲು ಈಗಷ್ಟೇ ಶುರು ಮಾಡಿದ್ದಾರೆ. 10 ವರ್ಷಗಳ ನಂತರ ಅವರಿಗೆ ಟಿಕೆಟ್‌ ಕೊಡುತ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ರೋಷನ್‌ ಬೇಗ್‌ ಐಎಂಎ ಹಗರಣದಲ್ಲಿ ಒಬ್ಬ ಆರೋಪಿ. ಸಾವಿರಾರು ಅಮಾಯಕರ ದುಡ್ಡು ಮುಳುಗಿಸಿದ ಆ ಪ್ರಕರಣದಲ್ಲಿ ಜೈಲು ಪಾಲುಗುತ್ತೇನೆ ಎಂಬ ಭಯದಿಂದ ಅವರು ಬಿಜೆಪಿ ಸೇರಿದ್ದಾರೆ. 'ಕ್ಷೇತ್ರದ ಜನತೆಗಾಗಿ ಬಿಜೆಪಿ ಜೊತೆ ಹೋದೆ' ಎನ್ನುವುದು ಅಪ್ಪಟ ಸುಳ್ಳು. ರೋಷನ್‌ ಬೇಗ್‌ ಆಗಾಗ ಬಣ್ಣ ಬದಲಾಯಿಸುವ ಗೊಸುಂಬೆ ಎಂದು ಸಿದ್ದರಾಮಯ್ಯ ಹರಿಹಾಯ್ದರು.


from India & World News in Kannada | VK Polls https://ift.tt/2Lb6sT6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...