ಹೈದರಾಬಾದ್: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಹೈದರಾಬಾದ್ ಪಶು ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿಚಾರಣೆಯನ್ನು ತ್ವರಿತಗತಿ ನ್ಯಾಯಾಲಯದಲ್ಲಿ ನಡೆಸಲು ಸೂಚನೆ ನೀಡಲಾಗಿದೆ. ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್ ಈ ಸಂಬಂಧ ಸೂಚನೆ ನೀಡಿದೆ. ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಆಕೆಯ ತಂದೆ ಆಗ್ರಹಿಸಿದ್ದಾರೆ. ಇಂಥ ಘೋರ ಕೃತ್ಯ ಎಸಗಿರುವ ಆರೋಪಿಗಳನ್ನು ಸಾರ್ವಜನಿಕವಾಗಿ ಸುಟ್ಟು ಹಾಕಬೇಕು, ನನ್ನ ಮಗಳನ್ನು ಹೇಗೆ ಕೊಂದರೋ ಅದೇ ರೀತಿ ಶಿಕ್ಷೆ ನೀಡಬೇಕೆಂದು ದಿಶಾ ತಾಯಿ ಕಣ್ಣೀರು ಹಾಕಿ ಒತ್ತಾಯಿಸಿದ್ದಾರೆ. ಹೈದರಾಬಾದ್ನ 26 ವರ್ಷದ ಪಶು ವೈದ್ಯೆ ದಿಶಾ (ಹೆಸರು ಬದಲಾಯಿಸಲಾಗಿದೆ) ಅವರನ್ನು ನಾಲ್ವರು ಆರೋಪಿಗಳು ಸಹಾಯ ಮಾಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಕುತ್ತು ಹಿಸುಕಿ ಕೊಲೆ ಮಾಡಿ ಸುಟ್ಟು ಹಾಕಿದರು. ನಾಲ್ವರು ಆರೋಪಿಗಳಾದ ಮೊಹಮದ್ ಆರೀಫ್, ಜೊಲ್ಲು ಶಿವ, ಜೊಲ್ಲು ನವೀನ್, ಚಿಂತಕುಂಟ ಚನ್ನಕೇಶವಲು ಮದ್ಯಪಾನ ಮಾಡಿ ಅತ್ಯಾಚಾರ ಎಸಗಿ ಆಕೆಯನ್ನು ಕೊಲೆ ಮಾಡಿದ್ದರು. ಹೊಸದಿಲ್ಲಿಯಲ್ಲಿ ನಡೆದ ನಿರ್ಭಯಾ ಪ್ರಕರಣದಷ್ಟೇ ಭೀಕರವಾಗಿರುವ ಘಟನೆ ಬಗ್ಗೆ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ತ್ವರಿತವಾಗಿ ಜಾರಿಗೆ ತರಬೇಕೆಂದು ಪ್ರತಿಭಟನೆಗಳು ನಡೆದಿವೆ. ರಾಜಕೀಯ ನಾಯಕರು, ಸಂಸದರು ಕೂಡ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
from India & World News in Kannada | VK Polls https://ift.tt/2OMwr5K