ಭಾರತಕ್ಕೆ ಟಿ20 ವಿಶ್ವಕಪ್ ಗೆಲ್ಲುವ ಸಾಮರ್ಥ್ಯವಿದೆ: ವಿಂಡೀಸ್ ಮಾಜಿ ದಿಗ್ಗಜ

ಹೊಸದಿಲ್ಲಿ: 2020 ಹೊಸ ವರ್ಷ ಆರಂಭವಾಗಿರುವಂತೆಯೇ ಎಲ್ಲರ ಚಿತ್ತ ಚುಟುಕು ವಿಶ್ವಕಪ್ ಮೇಲೆ ಹರಿದಿದೆ. ಪ್ರಸಕ್ತ ಸಾಲಿನಲ್ಲಿ ಟ್ವೆಂಟಿ-20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ಆತಿಥ್ಯ ವಹಿಸುತ್ತಿದೆ. ನಾಲ್ಕು ವರ್ಷಗಳ ಬಳಿಕ ಟಿ20 ವಿಶ್ವಕಪ್ ಆಯೋಜನೆಯಾಗುತ್ತಿರುವುದು ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಮಧ್ಯೆ ನಾಯಕ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಕೂಡಾ ಶ್ರೇಷ್ಠ ಸಂಯೋಜನೆಯ ತಂಡದ ರಚನೆಯ ಸಿದ್ಧತೆಯಲ್ಲಿದೆ. ಟೆಸ್ಟ್ ಹಾಗೂ ಏಕದಿನಗಳಿಗೆ ಹೋಲಿಸಿದರೆ ಭಾರತ ಟಿ20 ಶ್ರೇಯಾಂಕದಲ್ಲಿ ಹಿಂದೆ ಬಿದ್ದಿದೆ. ಆದರೂ ಭಾರತ ಪ್ರಮುಖ ಐಸಿಸಿ ಟೂರ್ನಿಗಳನ್ನು ಗೆಲ್ಲುವ ಸಾಮರ್ಥ್ಯವನ್ನು ಹೊಂದಿರುವುದಾಗಿ ವೆಸ್ಟ್‌ಇಂಡೀಸ್‌ನ ಬ್ಯಾಟಿಂಗ್ ದಿಗ್ಗಜ ಹಾಗೂ ಮಾಜಿ ನಾಯಕ ಅಭಿಪ್ರಾಯಪಟ್ಟಿದ್ದಾರೆ. ಐಸಿಸಿ ಆಯೋಜಿಸುತ್ತಿರುವ ವಿಶ್ವಕಪ್‌ಗಳಂತಹ ಪ್ರಮುಖ ಟೂರ್ನಿಗಳಲ್ಲಿ ಭಾರತ ಸ್ಥಿರವಾಗಿ ಸೆಮಿಫೈನಲ್ ಹಂತವನ್ನು ತಲುಪುತ್ತಿದೆ. ಆದರೆ ಅಲ್ಲಿಂದ ಮುಂದಕ್ಕೆ ಸಾಗಿ ಟ್ರೋಫಿ ಗೆಲ್ಲುವಲ್ಲಿ ಎಡವುತ್ತಿದೆ. ಭಾರತ ಕೊನೆಯದಾಗಿ 2013ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಇದುವೇ ಐಸಿಸಿ ಟೂರ್ನಿಯಲ್ಲಿ ಕೊನೆಯ ಗೆಲುವುವಾಗಿದೆ. "ಭಾರತ ಆಡುವ ಪ್ರತಿಯೊಂದು ಟೂರ್ನಿಯಲ್ಲೂ ಗೆಲ್ಲುವ ಸಾಮರ್ಥ್ಯವನ್ನು ಹೊಂದಿದೆ. ಪ್ರತಿಯೊಂದು ತಂಡಗಳು ಒಂದಲ್ಲ ಒಂದು ಹಂತದಲ್ಲಿ ಭಾರತವನ್ನು ಗುರಿಯಾಗಿಸಿದ್ದಾರೆ ಎಂಬುದು ವಿರಾಟ್ ಕೊಹ್ಲಿ ಪಡೆಯ ಶ್ಲಾಘನೆಗೆ ಕಾರಣವಾಗಿದೆ. ಯಾವುದೇ ಒಂದು ಹಂತದಲ್ಲಿ ಕ್ವಾರ್ಟರ್ ಫೈನಲ್, ಸೆಮಿಫೈನಲ್ ಅಥವಾ ಫೈನಲ್‌ನಲ್ಲಿ ಭಾರತದ ಸವಾಲನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಎದುರಾಳಿಗಳು ಅರಿತುಕೊಂಡಿದ್ದಾರೆ" ಎಂದು ಲಾರಾ ವಿವರಿಸಿದರು. ಈ ಮಧ್ಯೆ ಟೆಸ್ಟ್ ಕ್ರಿಕೆಟ್‌ನಲ್ಲಿ ವೈಯಕ್ತಿಕ ಗರಿಷ್ಠ 400 ರನ್ ಗಳಿಸಿದ ತಮ್ಮ ದಾಖಲೆಯನ್ನು ಮುರಿಯುವ ಸಾಮರ್ಥ್ಯವನ್ನು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಡೇವಿಡ್ ವಾರ್ನರ್ ಹೊಂದಿರುವುದಾಗಿ ಲಾರಾ ತಿಳಿಸಿದರು. 2004ನೇ ಇಸವಿಯಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ ಪಂದ್ಯದಲ್ಲಿ ಲಾರಾ 400 ರನ್ ದಾಖಲೆ ಬರೆದಿದ್ದರು. ಆಸ್ಟ್ರೇಲಿಯಾ ಪರ ನಾಲ್ಕನೇ ಕ್ರಮಾಂಕದಲ್ಲಿ ಆಡುತ್ತಿರುವ ಸ್ಮಿತ್‌ರಿಂದ ದಾಖಲೆ ಮುರಿಯುವ ಸಾಧ್ಯತೆ ಕಡಿಮೆಯಾಗಿದೆ. ಅವರೊಬ್ಬ ಶ್ರೇಷ್ಠ ಆಟಗಾರ. ಆದರೆ ಬ್ಯಾಟಿಂಗ್‌ನಲ್ಲಿ ಅಧಿಪತ್ಯ ಬೀರುವುದಿಲ್ಲ. ಇನ್ನೊಂದೆಡೆ ಡೇವಿಡ್ ವಾರ್ನರ್, ವಿರಾಟ್ ಕೊಹ್ಲಿ ಅಥವಾ ರೋಹಿತ್ ಶರ್ಮಾ ಅವರಂತಹ ಆಕ್ರಮಣಕಾರಿ ಆಟಗಾರರು ದಾಖಲೆ ಮುರಿಯುವ ಸಾಮರ್ಥ್ಯ ಹೊಂದಿದ್ದಾರೆ ಎಂದರು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2ZPcW0b

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...