ಟಿ20 ವಿಶ್ವಕಪ್‌ಗೆ 'ಗಬ್ಬರ್‌' ಧವನ್‌ಗಿಂತಲೂ ಅತ್ಯುತ್ತಮ ಓಪನರ್‌ನ ಆಯ್ಕೆ ಮಾಡಿದ ಕ್ರಿಶ್‌!

ಗುವಾಹಟಿ: ಇದೇ ವರ್ಷ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾದ ಆತಿಥ್ಯದಲ್ಲಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ನಡೆಯಲಿದ್ದು, 16 ರಾಷ್ಟ್ರಗಳ ನಡುವಣ ಹೈ ವೋಲ್ಟೇಜ್‌ ಕ್ರಿಕೆಟ್‌ ಕದನಕ್ಕೆ ಸಜ್ಜಾಗಲು ಈಗಾಗಲೇ ಎಲ್ಲಾ ತಂಡಗಳು ಸಮರಾಭ್ಯಾಸದಲ್ಲಿ ನಿರತವಾಗಿವೆ. ಚೊಚ್ಚಲ ಆವೃತ್ತಿಯ ಟೂರ್ನಿಯಲ್ಲೇ ಚಾಂಪಿಯನ್ಸ್‌ ಪಟ್ಟ ಪಡೆದು ಅಬ್ಬರಿಸಿದ್ದ ಭಾರತ ತಂಡ ಮತ್ತೊಮ್ಮೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಹಲವು ಬಾರಿ ನಾಕ್‌ಔಟ್‌ ಹಂತಕ್ಕೆ ಕಾಲಿಟ್ಟಿದ್ದು ಅದೃಷ್ಟ ಕೈಕೊಟ್ಟ ಪರಿಣಾಮ ನಿರಾಸೆ ಎದುರಿಸಿದೆ. ಆದರೆ, ಬ್ಯಾಟ್ಸ್‌ಮನ್‌ಗಳಿಗೆ ನೆರವಾಗಿವ ಫಾಸ್ಟ್‌ ಮತ್ತು ಬೌನ್ಸಿ ಪಿಚ್‌ಗಳನ್ನು ಹೊಂದಿರುವ ಆಸ್ಟ್ರೇಲಿಯಾದಲ್ಲಿ ಈ ಬಾರಿ ಪ್ರಶಸ್ತಿ ಗೆಲ್ಲುವುದು ಟೀಮ್‌ ಇಂಡಿಯಾದ ಮೊದಲ ಆದ್ಯತೆ ಆಗಿದೆ. ಈ ನಿಟ್ಟಿನಲ್ಲಿ ಈ ವರ್ಷ ಸಾಧ್ಯವಾದಷ್ಟು ಹೆಚ್ಚು ದ್ವಿಪಕ್ಷೀಯ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಸರಣಿಗಳನ್ನು ಆಡುವ ಯೋಜನೆ ಹೊಂದಿದೆ. ಈ ಮಧ್ಯೆ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ , ಮುಂಬರುವ ಟಿ20 ವಿಶ್ವಕಪ್‌ಗೆ ಭಾರತ ತಂಡದ ಪರ ಇನಿಂಗ್ಸ್‌ ಆರಂಭಿಸಲು 'ಗಬ್ಬರ್‌' ಖ್ಯಾತಿಯ ಎಡಗೈ ಬ್ಯಾಟ್ಸ್‌ಮನ್‌ ಅವರಿಗಿಂತಲೂ ಕನ್ನಡಿಗ ಸೂಕ್ತ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಸೈಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯಲ್ಲಿ ದಿಲ್ಲಿ ಪರ ಆಡುವ ಸಂದರ್ಭದಲ್ಲಿ ಕಾಲಿಗೆ ಗಾಯ ಮಾಡಿಕೊಂಡಿದ್ದ ಧವನ್‌, ಇದೇ ಕಾರಣಕ್ಕೆ ವೆಸ್ಟ್‌ ಇಂಡೀಸ್‌ ವಿರುದ್ಧ ಕಳೆದ ತಿಂಗಳು ನಡೆದ ಸೀಮಿತ ಓವರ್‌ಗಳ ಕ್ರಿಕೆಟ್‌ ಸರಣಿಗಳಿಂದ ಹೊರಗುಳಿದಿದ್ದರು. ಇದೀಗ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ರೋಹಿತ್‌ ಶರ್ಮಾ ವಿಶ್ರಾಂತಿ ಪಡೆದಿದ್ದು, ಅವರ ಸ್ಥಾನದಲ್ಲಿ ಧವನ್‌ ಮರಳಿ ತಂಡ ಸೇರಿಕೊಂಡಿದ್ದಾರೆ. ಇನ್ನು ಧವನ್‌ ಅನುಪಸ್ಥಿತಿಯಲ್ಲಿ ಭಾರತದ ಪರ ಇನಿಂಗ್ಸ್‌ ಆರಂಭಿಸಿದ್ದ ಕೆಎಲ್‌ ರಾಹುಲ್‌ ಸಿಕ್ಕ ಅವಕಾಶವನ್ನು ಅದ್ಭುತವಾಗಿ ಬಳಸಿಕೊಂಡು ಸ್ಥಿರ ಪ್ರದರ್ಶನದೊಂದಿಗೆ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಇದರೊಂದಿಗೆ ಧವನ್‌ ವೈಫಲ್ಯ ಎದುರಿಸಿದರೆ ತಂಡದಿಂದ ಹೊರ ಬೀಳುವ ಸ್ಥಿತಿ ನಿರ್ಮಾಣವಾಗಿದೆ. "ಶ್ರೀಲಂಕಾ ವಿರುದ್ಧ ಧವನ್‌ ರನ್‌ ಗಳಿಸಿದರೂ ಅದು ಗಣನೆಗೆ ಬರುವುದಿಲ್ಲ. ಆಯ್ಕೆ ಸಮಿತಿಯ ಮುಖ್ಯಸ್ಥನ ನಾನಾಗಿದ್ದರೆ ಟಿ20 ವಿಶ್ವಕಪ್‌ಗೆ ಧವನ್‌ ಅವರನ್ನು ಆರಂಭಿಕನಾಗಿ ಆಯ್ಕೆ ಮಾಡುತ್ತಿರಲಿಲ್ಲ. ಅವರ ಮತ್ತು ರಾಹುಲ್‌ ನಡುವೆ ಯಾವುದೇ ಸ್ಪರ್ಧೆಯಿಲ್ಲ. ರಾಹುಲ್‌ ಮೊದಲ ಆಯ್ಕೆ," ಎಂದು ತಮಿಳುನಾಡು ಮೂಲದ ಬ್ಯಾಟಿಂಗ್‌ ದಿಗ್ಗಜ ಶ್ರೀಕಾಂತ್‌ ಅಭಿಪ್ರಾಯ ಪಟ್ಟಿದ್ದಾರೆ. ಧವನ್‌, ಟಿ20 ಕ್ರಿಕೆಟ್‌ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಕಳೆದ 12 ಇನಿಂಗ್ಸ್‌ಗಳಲ್ಲಿ ಅವರು 110.56ರ ಸ್ಟ್ರೈಕ್‌ರೇಟ್‌ನಲ್ಲಿ ಕೇವಲ 272 ರನ್‌ಗಳನ್ನು ಮಾತ್ರ ಗಳಿಸಿದ್ದಾರೆ. ಮತ್ತೊಂದೆಡೆ ಶ್ರೇಷ್ಠ ಬ್ಯಾಟಿಂಗ್‌ ಲಯ ಕಂಡುಕೊಂಡಿರುವ ರಾಹುಲ್‌, ಆಡಿದ 9 ಇನಿಂಗ್ಸ್‌ಗಳಿಂದ 142.40ರ ಸ್ಟ್ರೈಕ್‌ರೇಟ್‌ನಲ್ಲಿ 356 ರನ್‌ಗಳನ್ನು ಬಾರಿಸಿದ್ದಾರೆ. ಒಟ್ಟಾರೆ ಟಿ20 ವಿಶ್ವಕಪ್‌ಗೆ ಇನ್ನೂ ಸಾಕಷ್ಟು ಸಮಯವಿದ್ದು ಸ್ಥಿರ ಪ್ರದರ್ಶನ ಕಾಯ್ದುಕೊಳ್ಳುವ ಆಟಗಾರನಿಗೆ ಅವಕಾಶ ಸಿಗಲಿದೆ. ಅಂದಹಾಗೆ ಧವನ್‌ ಮತ್ತು ರಾಹುಲ್‌ ನಡುವಣ ಪೈಪೋಟಿಯಂತೂ ಇಲ್ಲಿ ಸ್ಪಷ್ಟವಾಗಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2ZQzLAy

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...