370ನೇ ವಿಧಿ ರದ್ದತಿ ವೇಳೆ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿಗಳ ತೀರ್ಪು ಇಂದು

ಹೊಸದಿಲ್ಲಿ: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ವೇಳೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರಕಾರ ಹೇರಿದ್ದ ನಿರ್ಬಂಧಗಳನ್ನು ಪ್ರಶ್ನಿಸಿದ್ದ ಅರ್ಜಿಗಳ ಕುರಿತಾದ ತೀರ್ಪನ್ನು ಶುಕ್ರವಾರ ಸುಪ್ರೀಂಕೋರ್ಟ್‌ ಪ್ರಕಟಿಸಲಿದೆ. ನ್ಯಾ. ಎನ್‌.ವಿ. ರಮಣ, ನ್ಯಾ. ಸುಭಾಷ್‌ ರೆಡ್ಡಿ ಮತ್ತು ನ್ಯಾ. ಬಿ.ಆರ್‌. ಗವಾಯಿ ಅವರ ತ್ರಿಸದಸ್ಯ ಪೀಠ ತೀರ್ಪನ್ನು ನೀಡಲಿದೆ. ಕಳೆದ ವರ್ಷ ನ.27ಕ್ಕೆ ಪೀಠ ತೀರ್ಪು ಕಾಯ್ದಿರಿಸಿತ್ತು ಕೇಂದ್ರ ಸರಕಾರ ತಿಂಗಳುಗಟ್ಟಲೆ ಹೇರಿದ್ದ ಸಂವಹನ ನಿರ್ಬಂಧಗಳನ್ನು ಪ್ರಶ್ನಿಸಿ ಕಾಂಗ್ರೆಸ್‌ ಹಿರಿಯ ನಾಯಕ ಮತ್ತು ರಾಜ್ಯಸಭೆ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್‌, ಕಾಶ್ಮೀರ ಟೈಮ್ಸ್‌ ಕಾರ್ಯನಿರ್ವಾಹಕ ಸಂಪಾದಕಿ ಅನುರಾಧಾ ಭಾಸಿನ್‌ ಸೇರಿದಂತೆ ಹಲವರು ಸುಪ್ರೀಂಕೋರ್ಟ್‌ಗೆ ಅರ್ಜಿಗಳನ್ನು ಸಲ್ಲಿಸಿದ್ದರು. ಪ್ರಕರಣದಲ್ಲಿಪ್ರತಿವಾದ ಮಂಡಿಸಿದ್ದ ಕೇಂದ್ರ ಸರಕಾರ ನಿರ್ಬಂಧಗಳನ್ನು ಹೇರಿ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದರಿಂದಲೇ ಒಂದೇ ಒಂದು ಜೀವಕ್ಕೂ ಹಾನಿಯಾಗಿಲ್ಲ ಎಂದು ಕೋರ್ಟ್‌ ಎದುರು ಸಮರ್ಥನೆ ಮಂಡಿಸಿತ್ತು.


from India & World News in Kannada | VK Polls https://ift.tt/2N77nFl

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...