4 ವರ್ಷಗಳಲ್ಲಿ ಸಂಜುಗೆ ದಕ್ಕಿದ್ದು ಬರಿ ಎರಡು ಅವಕಾಶ; ಟ್ವಿಟರ್‌ನಲ್ಲಿ ಆಕ್ರೋಶ

ಹೊಸದಿಲ್ಲಿ: ಕೇರಳ ಮೂಲದ ಯುವ ವಿಕೆಟ್ ಕೀಪರ್ ಸಂಜು ಸ್ಯಾಮನ್ಸ್ 2015ರಲ್ಲಿ ಜಿಂಬಾಬ್ವೆ ವಿರುದ್ಧ ಮೊದಲ ಟಿ20 ಪಂದ್ಯವನ್ನಾಡಿದ್ದರು. ತದಾ ಬಳಿಕ ನಾಲ್ಕು ವರೆ ವರ್ಷಗಳ ಸುದೀರ್ಘ ಕಾಯುವಿಕೆಯ ಬಳಿಕ ಶ್ರೀಲಂಕಾ ವಿರುದ್ಧ ಎರಡನೇ ಟಿ20 ಪಂದ್ಯವನ್ನಾಡಿದರು. ಅಚ್ಚರಿಯೆಂಬಂತೆ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ಅವಕಾಶ ವಂಚಿತವಾಗಿದ್ದಾರೆ. ಶ್ರೀಲಂಕಾ ವಿರುದ್ಧ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿರುವ ಎರಡನೇ ಎಸೆತದಲ್ಲಿ ಔಟಾಗುವ ಮೂಲಕ ನಿರಾಸೆ ಮೂಡಿಸಿದ್ದರು. ಇದರೊಂದಿಗೆ ತಮ್ಮ ನಾಲ್ಕು ವರ್ಷಗಳ ಕಾಯುವಿಕೆಗೆ ಕೇವಲ ಎರಡು ಎಸೆತಗಳಲ್ಲೇ ಸ್ಕ್ರಿಪ್ಟ್ ಬರೆದಿದ್ದರು. ಸಂಜು ಪಾಲಿಗೆ ಟೀಮ್ ಇಂಡಿಯಾ ಬಾಗಿಲು ಮಗದೊಮ್ಮೆ ಮುಚ್ಚಿಕೊಂಡಿದೆ. ಈ ಮೂಲಕ ಮುಂಬರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ರಿಷಬ್ ಪಂತ್‌ಗೆ ಹೆಚ್ಚಿನ ಅವಕಾಶ ನೀಡಲಾಗುವುದು ಎಂಬ ಸ್ಪಷ್ಟ ಸಂದೇಶವನ್ನು ಆಯ್ಕೆ ಸಮಿತಿ ನೀಡಿದೆ. ಇದೇ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. ರಿಷಬ್ ಪಂತ್ ಸತತ ವೈಫಲ್ಯವನ್ನು ಅನುಭವಿಸುತ್ತಿದ್ದರೂ ಅವಕಾಶ ನೀಡಲಾಗುತ್ತಿದೆ. ಇನ್ನೊಂದೆಡೆ ಸಂಜು ಸ್ಯಾಮ್ಸನ್‌ಗೆ ಅವಕಾಶ ನಿರಾಕರಿಸಲಾಗಿದೆ. ಕಳೆದ ಐದು ವರ್ಷಗಳಲ್ಲಿ ಎರಡು ಪಂದ್ಯಗಳನ್ನಷ್ಟೇ ಆಡಿದ್ದಾರೆ. ಟ್ವಿಟರ್‌ನಲ್ಲೂ ಅಭಿಮಾನಿಗಳು ಆಯ್ಕೆ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಕಾ ಸರಣಿಯ ವೇಳೆಗೆ ವಿಶ್ರಾಂತಿಯಲ್ಲಿದ್ದ ರೋಹಿತ್ ಶರ್ಮಾ ವಾಪಸ್ ಆಗಿರುವುದು ಸಂಜು ತಂಡದಿಂದ ನಿರ್ಗಮಿಸುವಂತೆ ಮಾಡಿದೆ. ಹಾಗೊಂದು ವೇಳೆ ರಿಷಬ್ ಪಂತ್ ಗಾಯಾಳುವಾದರೆ ಕರ್ನಾಟಕದ ಕೆಎಲ್ ರಾಹುಲ್‌ರನ್ನು ಎರಡನೇ ವಿಕೆಟ್ ಕೀಪರ್ ಆಗಿ ಪರಿಗಣಿಸುವ ಸಾಧ್ಯತೆಯಿದೆ. ನ್ಯೂಜಿಲೆಂಡ್ ಸರಣಿಯಲ್ಲಿ ಭಾರತ ತಂಡವು ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾಗವಹಿಸಲಿದೆ. ತದಾ ಬಳಿಕ ಮೂರು ಪಂದ್ಯಗಳ ಏಕದಿನ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ಸೆಣಸಲಿದೆ. ನಾಲ್ಕು ವರ್ಷಗಳ ಬಳಿಕ ಸಂಜು ಆಡಿದ್ದು ಬರಿ ಎರಡೇ ಎಸೆತ ವಿಕೆಟ್ ಕೀಪರ್ ಸ್ಥಾನಕ್ಕೆ ರಿಷಬ್ ಪಂತ್ ಮೊದಲ ಆಯ್ಕೆ! ಭಾರತಕ್ಕೆ ವಿಶ್ವಕಪ್ ಗೆಲ್ಲುವುದೇ ಅನುಮಾನವೆನಿಸಿದೆ. ಸಂಜುಗೆ ಅಭಿಮಾನಿಗಳ ಬೆಂಬಲ ತಂಡದಿಂದ ಹೊರಗಟ್ಟುವ ನಿಟ್ಟಿನಲ್ಲಿ ಒಂದೇ ಒಂದು ಅವಕಾಶ ನೀಡಿತೇ? ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೇ ಅವಕಾಸ ಲಭಿಸುವುದೇ? ಸಂಜು ಔಟಾಗಲು ಇದೇನಾ ಕಾರಣ? ವೈಫಲ್ಯ ಅನುಭವಿಸಿದರೂ ಪಂತ್‌ಗೆ ಅವಕಾಶ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದಾಗ ನಾಯಕ ವಿರಾಟ್ ಕೊಹ್ಲಿ ರಿಯಾಕ್ಷನ್ ಹೀಗಿತ್ತು:


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3822qWq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...