ಸಿಎಎ, ಎನ್‌ಆರ್‌ಸಿಗೆ ವಿರೋಧ: ಕೇರಳದಲ್ಲಿ 620 ಕಿ.ಮೀ ಮಾನವ ಸರಪಳಿ ರಚನೆ

ತಿರುವನಂತಪುರಂ: ಪೌರತ್ವ ತಿದ್ದುಪಡಿ ಕಾಯ್ದೆ 2019 ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಗಣರಾಜ್ಯೋತ್ಸವ ದಿನದಂದೇ ಕೇರಳದಲ್ಲಿ ಬೃಹತ್ ಮಾನವ ಸರಪಳಿ ರಚಿಸುವ ಮೂಲಕ ಪ್ರತಿಭಟನೆ ಮಾಡಲಾಯಿತು. ಕೇರಳದ ಕಾಸರಗೋಡು ಜಿಲ್ಲೆಯಿಂದ ದಕ್ಷಿಣದ ಕಲಿಯಾಕ್ಕಾವಿಲೈವರೆಗೂ ಸುಮಾರು 620 ಕಿಲೋ ಮೀಟರ್ ಉದ್ದದ ಮಾನವ ಸರಪಳಿಯನ್ನು ರಚಿಸಲಾಯಿತು. ಸಿಪಿಐ(ಎಂ) ನೇತೃತ್ವದ ಎಡಪಕ್ಷಗಳು ಈ ಮಾವನ ಸರಪಳಿಯನ್ನು ರಚಿಸುವ ಮೂಲಕ ಪೌರತ್ವ ಕಾಯ್ದೆ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಬೃಹತ್ ಮಾನವ ಸರಪಳಿ ಪ್ರತಿಭಟನೆಯಲ್ಲಿ ಕೇರಳದ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಸಚಿವರು, ಶಾಸಕರು ಹಾಗೂ ಸಿಪಿಐ ಮುಖಂಡರು ಭಾಗಿಯಾದರು. ಸಿಎಎ ವಿರುದ್ಧ ಕೇರಳದಲ್ಲಿ ಹಲವಾರು ಪ್ರತಿಭಟನೆಗಳು ನಡೆದಿವೆ. ಪೌರತ್ವ ಕಾಯ್ದೆ ಹಾಗೂ ಎನ್‌ಸಿಆರ್‌ ವಿರೋಧಿಸಿ ನಿರ್ಣಯ ಕೈಗೊಂಡ ಮೂರು ರಾಜ್ಯಗಳ ಪೈಕಿ ಮೊದಲನೆಯದಾಗಿದೆ. ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ ಪಿಣರಾಯಿ ವಿಜಯನ್ “ಸಿಎಎ ವಿರುದ್ಧ ಇಂದು ಆಯೋಜಿಸಲಾದ ಮಾನವ ಸರಪಳಿ ಒಂದು ಬೃಹತ್ ಗೋಡಯಾಗಿ ಮಾರ್ಪಟ್ಟಿದೆ. ಈ ಕಾಯ್ದೆ ದೇಶದ ಜಾತ್ಯತೀತತೆಗೆ ಅಪಾಯಕಾರಿಯಾಗಿದೆ. ಈ ನೆಲದಲ್ಲಿ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್‌ ಕಾಯ್ದೆಗಳನ್ನು ಜಾರಿಗೆ ತರಲು ಅವಕಾಶ ನೀಡುವುದಿಲ್ಲ” ಎಂದರು. ಕೇರಳದ ಮಹಾ ಮಾನವ ಸರಪಳಿಯಲ್ಲಿ ಲಕ್ಷಾಂತರ ಜನರು ಭಾಗಿಯಾಗಿದ್ದಾರೆ ಎಂದು ಆಯೋಜಕರಾದ ಎಲ್‌ಡಿಎಫ್ ಪಕ್ಷದ ಮುಖಂಡರು ಹೇಳಿದ್ದಾರೆ. ಇದೇ ವೇಳೆ ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿಭಟನಾಕಾರರು ಓದುವ ಮೂಲಕ ಸಿಎಎ ಹಾಗೂ ಎನ್‌ಆರ್‌ಸಿಗೆ ವಿರೋಧ ವ್ಯಕ್ತಪಡಿಸಿದರು.


from India & World News in Kannada | VK Polls https://ift.tt/38K7iQ3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...