71ನೇ ಗರಣರಾಜ್ಯೋತ್ಸವಕ್ಕೆ ಶುಭ ಹಾರೈಸಿದ ಕ್ರೀಡಾ ತಾರೆಗಳು

ಹೊಸದಿಲ್ಲಿ: 71ನೇ ಗಣರಾಜ್ಯೋತ್ಸವದ ಅಂಗವಾಗಿ ದೇಶದ ಕ್ರೀಡಾ ತಾರೆಗಳೆಲ್ಲಾ ಶುಭಾಶಯ ಕೋರುವ ಮೂಲಕ ಅಭಿಮಾನಿಗಳೊಟ್ಟಿಗೆ ಸಂಭ್ರಮ ಹಂಚಿಕೊಂಡಿದ್ದಾರೆ. ಭಾರತ ಕ್ರಿಕೆಟ್‌ ತಂಡದ ಬ್ಯಾಟಿಂಗ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ತಮ್ಮ ಟ್ವಿಟರ್‌ ಖಾತೆ ಮೂಲಕ ಸಂದೇಶ ರವಾನಿಸಿದ್ದು, "ಎಲ್ಲರಿಗೂ ಣರಾಜ್ಯೋತ್ಸವ ದಿನದ ಶುಭಾಷಯಗಳು," ಎಂದು ಹಾರೈಸಿದ್ದಾರೆ. ಮಾಜಿ ಬ್ಯಾಟ್ಸ್‌ಮನ್‌ ವಿವಿಎಸ್‌ ಲಕ್ಷ್ಮಣ್‌ ಕೂಡ ಟ್ವಿಟರ್‌ ಮೂಲಕ ತಮ್ಮ ಸಂಭ್ರಮ ಹಂಚಿಕೊಂಡಿದ್ದು, "ಭಾರತದ ವೈಭವವನ್ನು ಆನಂದಿಸೋಣ. ಗಣರಾಜ್ಯೋತ್ಸವ ದಿನದ ಶುಭಾಶಯಗಳು. ಜೈ ಹಿಂದ್‌," ಎಂದು ಲಕ್ಷ್ಮಣ್‌ ಸಂದೇಶ ಬರೆದಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸ್ಟಾರ್‌ ಬ್ಯಾಟ್ಸ್‌ಮನ್‌ ಸುರೇಶ್‌ ರೈನಾ, ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಇರ್ಫಾನ್‌ ಪಠಾಣ್‌, ಟೀಮ್‌ ಇಂಡಿಯಾ ವೇಗಿ ಕೂಡ ಶುಭ ಹಾರೈಸಿದ್ದಾರೆ. ಶಮಿ, ಪ್ರಸ್ತಿತ ನ್ಯೂಜಿಲೆಂಡ್‌ ಪ್ರವಾಸದಲ್ಲಿರುವ ಭಾರತ ತಂಡದಲ್ಲಿದ್ದು, ಕಿವೀಸ್‌ ಎದುರು 5 ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯಲ್ಲಿ ಟೀಮ್‌ ಇಂಡಿಯಾ ಪರ ಸೇವೆ ಸಲ್ಲಿಸುತ್ತಿದ್ದಾರೆ. ಕ್ರಿಕೆಟಿಗರ ಹೊತಾಗಿ ಬಾಕ್ಸರ್‌ ವಿಜೇಂದರ್‌ ಸಿಂಗ್‌ ಕೂಡ ವಿಶೇಷ ಸಂದೇಶ ರವಾನಿಸಿದ್ದಾರೆ. "ಭಾರತಕ್ಕೆ ಹಲವು ಧರ್ಮ, ಸಮಾಜ, ಸಂಸ್ಕೃತಿ ಮತ್ತು ಭಾಷೆಗಳು ವರದಾನವಾಗಿ ಸಿಕ್ಕಿದೆ. 'ವಿವಿಧತೆಯಲ್ಲಿ ಏಕತೆ' ಎಂಬುದು ಹೆಮ್ಮೆಯ ವಿಚಾರ. ಭಾರತದಲ್ಲಿ ಮಾನವೀಯತೆ ತೆಂಬುದು ಕಾಲದಿಂದಲೂ ಉಳಿದುಕೊಂಡು ಬಂದಿದ," ಎಂದು ಅಭಿಮಾನಿಗಳೊಟ್ಟಿಗೆ ಸಂಭ್ರಮ ಹಂಚಿಕೊಂಡಿದ್ದಾರೆ. 1950ರಂದು ಭಾರತ ಇದೇ ದಿನ ತನ್ನ ಸಂವಿಧಾನವನ್ನು ಜಾರಿಗೆ ತಂದು ಗಣತಂತ್ರ ರಾಷ್ಟ್ರವಾಗಿ ಹೊರಹೊಮ್ಮಿತು. ದಿಲ್ಲಿಯ ರಾಜಪಥದಲ್ಲಿ ಪರೇಡ್‌ ಮೂಲಕ ಪ್ರಥಮ ಗಣರಾಜ್ಯೋತ್ಸವವನ್ನು ಆಚರಿಸಲಾಗಿತ್ತು. ಅಂದಿನಿಂದ ಇಂದಿನವರೆಗೂ ಇದೇ ಪದ್ದತಿಯನ್ನು ಮುಂದುವರಿಸಿಕೊಂಡು ಬರಲಾಗಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2sY17Zz

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...