ಮುಂಬಯಿ: ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ಆಟಗಾರ , ಹೊಸ ವರ್ಷದಂದು ಸೆರ್ಬಿಯಾ ಮೂಲದ ನಟಿ ನತಾಶಾ ಸ್ಟ್ಯಾನ್ಕೊವಿಚ್ ಜೊತೆ ನಿಶ್ಚಿತಾರ್ಥ ಮಾಡಿರುವ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿದ್ದರು. ಗಾಯದ ಸಮಸ್ಯೆಯಿಂದ ಬಳಲಿ ಪುನಶ್ಚೇತನದ ಹಂತದಲ್ಲಿರುವ 26 ವರ್ಷದ ಆಲ್ರೌಂಡರ್ ಆಟಗಾರ ಆದಷ್ಟು ಬೇಗನೇ ಸೇರಿಕೊಳ್ಳುವ ಇರಾದೆಯಲ್ಲಿದ್ದಾರೆ. ಬೆನ್ನು ನೋವಿನ ಸಮಸ್ಯೆಗೊಳಗಾಗಿರುವ ಹಾರ್ದಿಕ್ ಪಾಂಡ್ಯ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿಂದ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ದೂರವುಳಿದಿದ್ದಾರೆ. ಬಳಿಕ ಲಂಡನ್ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ನ್ಯೂಜಿಲೆಂಡ್ ಪ್ರವಾಸದ ವೇಳೆಗೆ ತಂಡಕ್ಕೆ ಪುನರಾಗಮನ ಮಾಡಿಕೊಳ್ಳುವ ಗುರಿಯನ್ನು ಪಾಂಡ್ಯ ಹೊಂದಿದ್ದಾರೆ. ಕಿವೀಸ್ ಸರಣಿಯಲ್ಲಿ ಭಾರತ ಐದು ಪಂದ್ಯಗಳ ಟ್ವೆಂಟಿ-20, ಮೂರು ಪಂದ್ಯಗಳ ಏಕದಿನ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಗಳಲ್ಲಿ ಭಾಗವಹಿಸಲಿದೆ. ಬಲ್ಲ ಮೂಲಗಳ ಪ್ರಕಾರ ಕಿವೀಸ್ ವಿರುದ್ಧದ ಟೆಸ್ಟ್ ತಂಡದಲ್ಲಿ ಹಾರ್ದಿಕ್ ಗುರುತಿಸಿಕೊಳ್ಳುವುದು ಕಷ್ಟಸಾಧ್ಯವಾಗಿದೆ. ಆದರೆ ಸೀಮಿತ ಓವರ್ಗಳ ಸರಣಿಯಲ್ಲಿ ತಂಡದ ಭಾಗವಾಗುವ ಸಾಧ್ಯತೆಯಿದೆ. ಪ್ರಮುಖವಾಗಿಯೂ ಮುಂಬರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಪಾಂಡ್ಯ ತಂಡಕ್ಕೆ ಮರಳುವುದು ಅತಿ ಅಗತ್ಯವೆನಿಸಿದೆ. ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಕೊರತೆಯನ್ನು ಟೀಮ್ ಇಂಡಿಯಾ ಎದುರಿಸುತ್ತಿದೆ. ಹಾರ್ದಿಕ್ ಪಾಂಡ್ಯ ತಮ್ಮ ಕೆರಿಯರ್ನಲ್ಲಿ ಉತ್ತುಂಗಕ್ಕೇರಿದ ಸಂದರ್ಭದಲ್ಲಿ ಕಾಫಿ ವಿತ್ ಕರಣ್ ಟಿವಿ ಶೋ ವಿವಾದಕ್ಕೆ ಸಿಲುಕಿದ್ದರು. ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದರು. ಬಳಿಕ ತಾತ್ಕಾಲಿಕ ನಿಷೇಧ ಜತೆಗೆ ಭಾರಿ ದಂಡವನ್ನು ತೆರಬೇಕಾಯಿತು. ಸ್ಟೈಲಿಷ್ ಆಟಗಾರರಲ್ಲಿ ಒಬ್ಬರಾಗಿರುವ ಹಾರ್ದಿಕ್ ಪಾಂಡ್ಯ, ವಿಶಿಷ್ಟ ರೀತಿಯಲ್ಲಿ ತಮ್ಮ ಪ್ರೇಯಸಿ ಕೈ ಬೆರಳಿಗೆ ಉಂಗುರವನ್ನು ಹಾಕಿದ್ದರು. ಹೊಸ ವರ್ಷದಂದು ಸಮುದ್ರ ನಡುವೆ ಬೋಟ್ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಮುಂಬಯಿಯಲ್ಲಿ ನತಾಶಾ ಸ್ಟ್ಯಾನ್ಕೊವಿಚ್ ಕುಟುಂಬದ ಜೊತೆಗೆ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/35yDRhT