ಬಳ್ಳಾರಿ: ಶಾಸಕ ಸೋಮಶೇಖರ ರೆಡ್ಡಿ ಮನೆ ಮುಂದೆ ನಡೆಸಲು ನಗರ ಪ್ರವೇಶ ಮಾಡುತ್ತಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಅವರನ್ನು ನಗರದ ಹೊರವಲಯದಲ್ಲಿ ಸೋಮವಾರ ಪೊಲೀಸರು ವಶಕ್ಕೆ ಪಡೆದರು. ಶಾಸಕ ಸೋಮಶೇಖರ್ ರೆಡ್ಡಿ ನಿವಾಸದ ಎದುರು ಪ್ರತಿಭಟನೆ ನಡೆಸಲು ಆಗಮಿಸಿದ ಶಾಸಕ ಜಮೀರ್ ಅಹ್ಮದ್ ಅವರನ್ನು ಹಾಗೂ ಬೆಂಬಲಿಗರನ್ನು ನಗರದ ಹೊರವಲಯದಲ್ಲಿ ಪೊಲೀಸರು ಬಂಧಿಸಿ ಪೊಲೀಸ್ ವಾಹನದಲ್ಲಿ ಕುಡಿತಿನಿ ಪೊಲೀಸ್ ಸ್ಟೇಷನ್ಗೆ ಕರೆದೊಯ್ದರು. ಮುಂಜಾಗ್ರತಾ ಕ್ರಮವಾಗಿ ಶಾಸಕ ಮನೆಗೆ ಬೀಗಿ ಭದ್ರತೆ ಕೈಗೊಳ್ಳಲಾಗಿತ್ತು. ಸ್ಥಳೀಯ ಪೊಲೀಸರು ಸೇರ ಒಂದು ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ನಗರದ ಎಂಜಿನಿಯರಿಂಗ್ ಕಾಲೇಜು, ಸುಧಾ ಕ್ರಾಸ್ ಬಳಿ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಜಮ್ಮೀರ್ ಅಹಮದ್ ಬಳ್ಳಾರಿಗೆ ಬರೋದನ್ನ ಬಿಜೆಪಿ ನಾಯಕರು ಸೇರಿದಂತೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಜನವರಿ 3ರ ಶುಕ್ರವಾರ ಬಳ್ಳಾರಿಯಲ್ಲಿ ಸಿಎಎ ಪರ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸೋಮಶೇಖರ್ ರೆಡ್ಡಿ, "ನೀವು ಶೇ. 17ರಷ್ಟು ಮಾತ್ರವಿದ್ದು, ಶೇ. 80ರಷ್ಟು ನಾವು ಇದ್ದೇವೆ. ನಾವು ತಿರುಗಿಬಿದ್ದರೆ ನಿಮ್ಮ ಪರಿಸ್ಥಿತಿ ಏನಾಗಬೇಕು ಎಂಬುದನ್ನು ಊಹಿಸಿಕೊಳ್ಳಿ. ಹಿಂದೂಗಳನ್ನು ಕೆಣಕಲು ಬರಬೇಡಿ," ಎಂಬುದಾಗಿ ಮುಸ್ಲಿಂ ಸಮುದಾಯದವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದರು. ಸೋಮಶೇಖರ್ ರೆಡ್ಡಿ ಅವರ ಈ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿದ್ದ ಅವರು ಸೋಮವಾರ ಸೋಮಶೇಖರ್ ರೆಡ್ಡಿ ಅವರ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಪ್ರಕಟಣೆಯದಲ್ಲಿ ತಿಳಿಸಿದ್ದರು. ಈ ಸಂಬಂಧ ಎಸ್ಪಿ ಸಿಕೆ ಬಾಬಾ ಅವರಿಗೆ ಭದ್ರತೆ ಒದಗಿಸುವಂತೆ ಕೋರಿ ಪತ್ರ ಬರೆದಿದ್ದರು. ಸೋಮಶೇಖರ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು: ಸೋಮಶೇಖರ್ ರೆಡ್ಡಿಯವರನ್ನು ಬಂಧಿಸುವಂತೆ ಕರ್ನಾಟಕ ಸರಕಾರ ಮತ್ತು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದರು. ಸೋಮಶೇಖರ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಮಾಧ್ಯಮಗಳ ಮೂಲಕ ಅವರ ಬಂಧನಕ್ಕೆ ಸೋಮವಾರದವರೆಗೆ ಗಡುವು ನೀಡಿದ್ದರು. ಸೋಮವಾರದ ಒಳಗೆ ಅವರನ್ನು ಪೊಲೀಸರು ಬಂಧಿಸಿಲ್ಲದ ಕಾರಣ ತಾವೇ ಪ್ರತಿಭನೆಗೆ ಮುಂದಾಗಿದ್ದಾರೆ.
from India & World News in Kannada | VK Polls https://ift.tt/2uJeHk8