ಸಿಐಡಿ ಹಾಗೂ ನಿತ್ಯಾನಂದ ಸ್ವಾಮಿಗೆ ನೋಟಿಸ್‌ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಡದಿಯ ನಿತ್ಯಾನಂದ ಸ್ವಾಮೀಜಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿದ ಅರ್ಜಿ ಸಂಬಂಧ ಹಾಗೂ ನಿತ್ಯಾನಂದ ಸ್ವಾಮೀಜಿಗೆ ಶುಕ್ರವಾರ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಮೂಲ ದೂರುದಾರ ಲೆನಿನ್‌ ಸಲ್ಲಿಸಿರುವ ಅರ್ಜಿ ನ್ಯಾ.ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬಂದಿತು. ಕೆಲ ಕಾಲ ವಾದ ಆಲಿಸಿದ ಬಳಿಕ ಪೀಠ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ, ಆಕ್ಷೇಪ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು. ಅರ್ಜಿದಾರರ ಪರ ವಕೀಲರು, ''ನ್ಯಾಯಾಲಯವು 2012ರಲ್ಲಿಜಾಮೀನು ನೀಡುವಾಗ ಅಧೀನ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು. ಅದನ್ನು ಉಲ್ಲಂಘನೆ ಮಾಡಿದ್ದಾರೆ. ಕೋರ್ಟ್‌ ವಿಚಾರಣೆಗೆ ಹಾಜರಾಗುತ್ತಿಲ್ಲ'' ಎಂದು ಆರೋಪಿಸಿದರು. ''ನಿತ್ಯಾನಂದ ಅವಧಿ ಮುಗಿದಿರುವ ಪಾಸ್‌ ಪೋರ್ಟ್‌ ಬಳಸಿ ದೇಶ ತೊರೆದಿದ್ದಾನೆ. ಭಾರತದಲ್ಲಿದ್ದಲ್ಲಿಯೇ ಇದ್ದೇನೆ ಎಂದು ಸುಳ್ಳು ಪ್ರಮಾಣಪತ್ರಗಳನ್ನು ಸಲ್ಲಿಸಿ ನ್ಯಾಯಾಲಯಕ್ಕೆ ಹಾಜರಾತಿಯಿಂದ ವಿನಾಯಿತಿಗೆ ಅರ್ಜಿ ಸಲ್ಲಿಸಿದ್ದಾನೆ. ಆದ್ದರಿಂದ ಜಾಮೀನು ರದ್ದು ಪಡಿಸಬೇಕು'' ಎಂದು ಮನವಿ ಮಾಡಿದರು. ''ನಿತ್ಯಾನಂದ ಸ್ವಾಮೀಜಿ ಎಲ್ಲಿದ್ದಾನೆ ಎಂಬುದು ಯಾರಿಗೂ ತಿಳಿದಿಲ್ಲ. ಕೆಲ ದಿನ ಈಕ್ವೆಡಾರ್‌ ದ್ವೀಪದಲ್ಲಿ ರಾಷ್ಟ್ರ ಸ್ಥಾಪಿಸಿರುವುದಾಗಿ ಸುದ್ದಿ ಬಂದಿತ್ತು. ಆತ ಎಲ್ಲೂಇಲ್ಲಎಂದು ಹೇಳಲಾಗುತ್ತಿದೆ. ಪೊಲೀಸರು ಆತ ವಿಚಾರಣೆಗೆ ಹಾಜರಾಗದಿದ್ದರೂ ಹುಡುಕುವ ಕೆಲಸ ಮಾಡುತ್ತಿಲ್ಲ'' ಎಂದು ಅರ್ಜಿಯಲ್ಲಿ ಹೇಳಲಾಗಿದೆ. ''ಅತ್ಯಾಚಾರ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧ ರಾಮನಗರ ಸೆಷನ್ಸ್‌ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೇರೊಂದು ನ್ಯಾಯಾಧಿಲಯಕ್ಕೆ ವರ್ಗಾಧಿಯಿಸಿಬೇಕು,'' ಎಂದು ಲೆನಿನ್‌ ಹೈಕೋರ್ಟ್‌ ನಲ್ಲಿಅರ್ಜಿ ಸಲ್ಲಿಸಿದ್ದರು. ಆಗ ಪ್ರಕರಣದಲ್ಲಿಸರಕಾರ ನೇಮಿಸಿರುವ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಸರಿಯಾಗಿ ವಾದ ಮಂಡಿಸುತ್ತಿಲ್ಲಎಂದು ಆರೋಪಿಸಿದ್ದರಲ್ಲದೆ, ಆ ಆರೋಪಗಳ ಬಗ್ಗೆ ವಿವರಣೆ ನೀಡಿ ಎಂದು ಹೈಕೋರ್ಟ್‌ ರಾಜ್ಯ ಪ್ರಾಸಿಕ್ಯೂಷನ್‌ಗೆ ಸೂಚಿಸಿತ್ತು.


from India & World News in Kannada | VK Polls https://ift.tt/36rN2Be

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...