ಜಬಲ್ಪುರ್(ಮಧ್ಯಪ್ರದೇಶ): ( 2019) ಜಾರಿ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಪಶ್ಚಿಮ ಬಂಗಾಳಲ್ಲಿ ಸ್ವತಃ ಸಿಎಂ ಮಮತಾ ಬ್ಯಾನರ್ಜಿ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಎಡಪಕ್ಷಗಳ ಜೊತೆಗೆ ಕಾಂಗ್ರೆಸ್ ಕೂಡಾ ಸಿಎಎ ವಿರೋಧಿಸಿ ಅಖಾಡಕ್ಕೆ ಇಳಿದಿದೆ. ಈ ನಡುವೆ ಗೃಹ ಸಚಿವ ಪೌರತ್ವ ಕಾಯ್ದೆ ಜಾರಿಯಾದಲ್ಲಿ ಭಾರತೀಯರ ಪೌರತ್ವವನ್ನು ಕಸಿದುಕೊಳ್ಳಬಹುದು ಎನ್ನಲಾಗುತ್ತಿರುವ ಒಂದು ಅಂಶಗಳು ಇರುವುದನ್ನು ಕಾಯ್ದೆಯಲ್ಲಿ ತೋರಿಸಿ ಎಂದು ವಿರೋಧಪಕ್ಷಗಳಿಗೆ ಸವಾಲು ಹಾಕಿದ್ದಾರೆ. ಮಧ್ಯಪ್ರದೇಶದಲ್ಲಿ ಭಾನುವಾರ ಮಾತನಾಡಿದ ಅಮಿತ್ ಶಾ , ಕಾಂಗ್ರೆಸ್ ಹಾಗೂ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದರು. ದೇಶದ ವಿಭಜನೆಯ ಸಂದರ್ಭದಲ್ಲಿ ಕಾಂಗ್ರೆಸ್ ಭಾರತವನ್ನು ಧರ್ಮದ ಆಧಾರದಲ್ಲಿ ವಿಭಜನೆ ಮಾಡಿತು. ಇದೇ ಸಂದರ್ಭದಲ್ಲಿ ಪಾಕಿಸ್ತಾನದ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಪೌರತ್ವವನ್ನು ನೀಡುವ ಭರವಸೆಯನ್ನು ಕಾಂಗ್ರೆಸ್ ನೀಡಿತ್ತು. ಆದರೆ ಇದೀಗ ಅದೇ ಕೆಲಸವನ್ನು ಬಿಜೆಪಿ ಸರಕಾರ ಮಾಡಲು ಮುಂದಾದರೆ ಅದನ್ನು ಖಾಂಗ್ರೆಸ್ ಮುಖಂಡರು ವಿರೋಧಿಸುತ್ತದೆ ಎಂದು ಕಿಡಿಕಾರಿದರು. ದೇಶ ವಿಭಜನೆಯ ಸಂದರ್ಭದಲ್ಲಿ ಪೂರ್ವ ಹಾಗೂ ಪಶ್ಚಿಮ ಪಾಕಿಸ್ತಾನದಲ್ಲಿ ಹಿಂದೂಗಳ ಜನಸಂಖ್ಯೆ 30 ಶೇಕಡಾ ಇತ್ತು ಆದರೆ ಇಂದು ಅದು ಪಾಕಿಸ್ತಾನದಲ್ಲಿ ಕೇವಲ 3 ಶೇಕಡಾಗೆ ಬಂತು ತಲುಪಿದೆ ಬಾಂಗ್ಲಾದೇಶದಲ್ಲಿ 7 ಶೇಕಡದಷ್ಟು ಹಿಂದೂಗಳಿದ್ದಾರೆ. ಭಾರೀ ಪ್ರಮಾಣದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದೆ ಇದು ಆತಂಕಕಾರಿ ವಿಚಾರ ಎಂದರು. ಈ ಕಾರಣಕ್ಕಾಗಿ ಧಾರ್ಮಿಕ ಪೀಡನೆಗೆ ಒಳಗಾದ ಮೂರು ದೇಶದಗಳ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಪೌರತ್ವ ನೀಡುವ ನಿಟ್ಟಿನಲ್ಲಿ ಸಿಎಎ ಜಾರಿಗೆ ತರಲಾಗಿದೆ. ಆದರೆ ಇದರಲ್ಲಿ ಯಾವುದೇ ಭಾರತೀಯ ಪೌರತ್ವವನ್ನು ಕಿತ್ತುಕೊಳ್ಳುವ ಉದ್ದೇಶವಿಲ್ಲ. ಹೀಗಿದ್ದರೂ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಕಾಯ್ದೆ ಕುರಿತಾಗಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು. ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ವಿರೋಧಿಸಿ ಎಡಪಕ್ಷಗಳು, ಪ್ರಗತಿಪರರು, ಕಾಂಗ್ರೆಸ್ ಹಾಗೂ ಮುಸ್ಲಿಮರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಹಾಗೂ ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾಚಾರದ ಸ್ವರೂಪ ಪಡೆದುಕೊಂಡು ಪೊಲೀಸ್ ಗೋಲಿಬಾರ್ ನಡೆದಿದೆ.
from India & World News in Kannada | VK Polls https://ift.tt/2smKFlu