ಬೆಂಗಳೂರು: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಹಲವು ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಬುಧವಾರ ಮುಷ್ಕರಕ್ಕೆ ಕರೆ ನೀಡಿವೆ. ಆದರೆ ರಾಜ್ಯದಲ್ಲಿ ಯಾವುದೇ ಬಂದ್ ಇರುವುದಿಲ್ಲ. ಬಸ್, ಆಟೊ, ಟ್ಯಾಕ್ಸಿ, ರೈಲು ಮತ್ತು ಸರಕು ಸಾಗಣೆ ವಾಹನಗಳ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ರ್ಯಾಲಿಗೆ ಪೊಲೀಸರು ಅವಕಾಶ ನಿರಾಕರಿಸಿದ್ದಾರೆ. ''ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಮುಷ್ಕರವನ್ನು '' ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ನಾವು ಬಂದ್ ಮಾಡುತ್ತಿಲ್ಲ, ಮುಷ್ಕರವನ್ನಷ್ಟೇ ನಡೆಸುತ್ತಿದ್ದೇವೆ,'' ಎಂದು ಕಾರ್ಮಿಕ ಸಂಘಟನೆಗಳು ತಿಳಿಸಿವೆ. ಹೀಗಾಗಿ, ನಿತ್ಯದ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿಲ್ಲ. ಸರಕಾರಿ ಕಚೇರಿಗಳು, ನ್ಯಾಯಾಲಯಗಳು, ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದರೆ ಎಸ್ಬಿಐ ಹೊರತುಪಡಿಸಿ, ಉಳಿದ ಕೆಲವು ಬ್ಯಾಂಕ್ಗಳ ಸೇವೆ ಸ್ಥಗಿತವಾಗುವ ಸಾಧ್ಯತೆ ಇದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘಟನೆಗಳು, ಆಟೊ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್, ಸರಕು ಸಾಗಣೆ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘಟನೆಗಳು ಮುಷ್ಕರಕ್ಕೆ ಬಾಹ್ಯ ಬೆಂಬಲವನ್ನಷ್ಟೇ ನೀಡಿವೆ. ಆದರೆ, ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಹಾಗಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯವ್ಯ, ಈಶಾನ್ಯ ಸಾರಿಗೆ ಸಂಸ್ಥೆ ಬಸ್ಗಳು, ಆಟೊ, ಪ್ರವಾಸಿ ವಾಹನಗಳು, ರೈಲು, ಸರಕು ಸಾಗಣೆ ವಾಹನಗಳು ಎಂದಿನಂತೆ ಸಂಚರಿಸಲಿವೆ. , ಮಡಿಕೇರಿಯಲ್ಲಿ ಬಸ್ಗೆ ಕಲ್ಲು ತೂರಾಟ. ಮಾಲ್ಗಳು, ಚಿತ್ರಮಂದಿರಗಳು, ಹೋಟೆಲ್ಗಳು, ಪೆಟ್ರೋಲ್ ಬಂಕ್ಗಳು ಎಂದಿನಂತೆ ತೆರೆದಿರಲಿವೆ. ಕನ್ನಡಪರ ಸಂಘಟನೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ಬಂದ್ಗೆ ಬೆಂಬಲ ಕೊಟ್ಟಿಲ್ಲ. ಹಿಂದೆ ಸರಿದ ಕಂಪನಿಗಳುಕೈಗಾರಿಕೆಗಳು, ಸಿದ್ಧ ಉಡುಪು ಕಾರ್ಖಾನೆಗಳ ನೌಕರರು ಮುಷ್ಕರದಲ್ಲಿ ಭಾಗವಹಿಸುತ್ತಿದ್ದಾರೆ. ಹಾಗಾಗಿ, ಉತ್ಪಾದನೆ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಆದರೆ, ಸರಕಾರಿ ಸ್ವಾಮ್ಯದ ಕಂಪನಿಗಳಾದ ಬಿಇಎಂಎಲ್, ಎಚ್ಎಎಲ್, ಬಿಎಚ್ಇಎಲ್, ಡಿಆರ್ಡಿಒ, ಜಿಟಿಆರ್ಇ, ಐಡಿಐ, ಎಡಿಇ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಬಸ್ ಸಂಚಾರಕ್ಕೆ ಕಟ್ಟುನಿಟ್ಟಿನ ಸೂಚನೆ''ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಇರುತ್ತದೆ. ಕರ್ತವ್ಯಕ್ಕೆ ಗೈರುಹಾಜರಾಗುವ ಅಧಿಕಾರಿ, ಸಿಬ್ಬಂದಿಗಳ ವೇತನ ಕಡಿತಗೊಳಿಸಿ ಶಿಸ್ತು ಕ್ರಮ ಜರುಗಿಸಲಾಗುವುದು,'' ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದ್ದಾರೆ. ''ಮುಷ್ಕರದಲ್ಲಿ ಭಾಗವಹಿಸುವವರು ಸರಕಾರಿ ಆಸ್ತಿ-ಆಸ್ತಿಗಳಿಗೆ ಹಾನಿಯುಂಟು ಮಾಡಬಾರದು. ಕಾನೂನು ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು,'' ಎಂದವರು ಎಚ್ಚರಿಸಿದ್ದಾರೆ. ಅನಿವಾರ್ಯ ಸಂದರ್ಭ ಹೊರತುಪಡಿಸಿ ಯಾವುದೇ ರೀತಿಯ ರಜೆ ಮಂಜೂರು ಮಾಡಬಾರದು ಎಂದು ಕೆಎಸ್ಆರ್ಟಿಸಿ ಎಂಡಿ ಶಿವಯೋಗಿ ಸಿ.ಕಳಸದ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಜನಜೀವನ ಸಾಮಾನ್ಯವಾಗಿರುವಂತೆ ನೋಡಿಕೊಳ್ಳಲಾಗುವುದು. ಸಮಾಜ ವಿರೋಧಿ ಶಕ್ತಿಗಳು ಬಂದ್ನಲ್ಲಿ ಭಾಗವಹಿಸಲು ಒತ್ತಾಯ ಮಾಡಿದರೆ, ಇಲ್ಲವೇ ಅಂಗಡಿ ಮುಂಗಟ್ಟು ಮುಚ್ಚಿಸಲು ಪ್ರಯತ್ನಿಸಿದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವರು. ಸಾರ್ವಜನಿಕರು ಶಾಂತಿ ಕಾಪಾಡಬೇಕು. - ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ರಾಜ್ಯದ ಯಾವುದೇ ಶಾಲಾ- ಕಾಲೇಜುಗಳಿಗೆ ರಜೆ ಇರುವುದಿಲ್ಲ. ಪರಿಸ್ಥಿತಿ ನೋಡಿಕೊಂಡು ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಬಹುದು. - ಎಸ್. ಸುರೇಶ್ಕುಮಾರ್, ಶಿಕ್ಷಣ ಸಚಿವ ರಾಜ್ಯಾದ್ಯಂತ ಚಿತ್ರಮಂದಿರಗಳು ತೆರೆದಿರುತ್ತವೆ. ಚಿತ್ರೋದ್ಯಮದ ಎಲ್ಲಚಟುವಟಿಕೆಗಳು ನಡೆಯುತ್ತವೆ. - ಜೈ ರಾಜ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ
from India & World News in Kannada | VK Polls https://ift.tt/2sUFMQE