ಮುಖ್ಯಮಂತ್ರಿ ಬಿಎಸ್‌ವೈ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ: ಶ್ರೀರಾಮುಲು

ಬಳ್ಳಾರಿ: ಸೋತವರನ್ನು ಸಚಿವರನ್ನಾಗಿ ಮಾಡುವ ಬೇಡಿಕೆ ವಿಚಾರದ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ಬಿ ತಿಳಿಸಿದ್ದಾರೆ. ನಗರದಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಡಿಸಿಎಂ ಆಗಬೇಕು ಅನ್ನೋದು ಜನರ ಬೇಡಿಕೆ ಇದೆ. ಜನರ ಬೇಡಿಕೆಯನ್ನ ನಾನು ಅಲ್ಲಗೆಳೆಯುವುದಿಲ್ಲ. ಈ ಬಗ್ಗೆ ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು. ರಚನೆಯಾಗಲು ಕಾರಣರಾದವರಿಗೆ ಸೂಕ್ತ ಸ್ಥಾನಮಾನ ನೀಡುವ ಕುರಿತು ಈಗಾಗಲೇ ಹಲವಾರು ಬಾರಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಎಂದಿಗೂ ಮಾತು ತಪ್ಪುವುದಿಲ್ಲ ಎಂದು ಶ್ರೀರಾಮುಲು ಸ್ಪಷ್ಟಪಡಿಸಿದರು. ಬಳ್ಳಾರಿ ವಿಮ್ಸ್ ನಲ್ಲಿ ವ್ಹೀಲ್ ಚೇರ್ ನೀಡದೇ ಅಮಾನವೀಯ ಘಟನೆ ಹಿನ್ನಲೆ ಈ ಬಗ್ಗೆ ತನಿಖೆ ನಡೆಸಲು ಅಧಿಕಾರಿಯ ನೇಮಕ ಮಾಡಲಾಗುವುದು. ಇಂತಹ ಘಟನೆಗಳನ್ನ ಬಿಹಾರ ಉತ್ತರ ಪ್ರದೇಶ ರಾಜ್ಯಗಳಲ್ಲಿ ನೋಡಿದ್ದೀವಿ. ಆದರೆ ಈಗ ಬಳ್ಳಾರಿಯಲ್ಲಿ ಇಂತಹ ಘಟನೆ ನಡೆದಿದೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು. ತಪ್ಪಿತಸ್ಥರು ಯಾರೇ ಇದ್ದರೂ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್‌ಗಳ ಕೊರತೆ ಇದೆ. ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದಾಗ ಈ ಬಗ್ಗೆ ಮಾಹಿತಿ ದೊರೆಯಿತು. ಬೆಡ್ ಕೊರತೆ ಇರುವ ಆಸ್ಪತ್ರೆಗಳಲ್ಲಿ ಬೆಡ್ ಹೆಚ್ಚಳ ಮಾಡಲಾಗುವುದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದರು.


from India & World News in Kannada | VK Polls https://ift.tt/2vgVfvb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...