ಬೆಂಗಳೂರು: ನಗರದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಇಬ್ಬರು ರೌಡಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಎರಡು ಕೊಲೆ ಮತ್ತು ಇತರ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ರೌಡಿ ಶೀಟರ್ಗಳಾದ ಹಂದಿ ಮಹೇಶ್ ಮತ್ತು ಸತೀಶ್ ಮೇಲೆ ಮೈಕೋ ಲೇಔಟ್ನಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಸ್ವರಕ್ಷಣೆಗಾಗಿ ಇಬ್ಬರು ರೌಡಿಗಳ ಮೇಲೆ ಸಿಸಿಬಿ ಪೊಲೀಸರು ಗುಂಡು ಹಾರಿಸಿದ್ದಾರೆ. ಬಿಟಿಎಂ ಕೆರೆಯ ಹತ್ತಿರ ಪೊಲೀಸರ ಕಣ್ಣಿಗೆ ಬಿದ್ದ ಸತೀಶ್ ಮತ್ತು ಹಂದಿ ಮಹೇಶ್ಗೆ ಶರಣಾಗಲು ಸಿಸಿಬಿ ಪೊಲೀಸರು ಸೂಚಿಸಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಸ್ವರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಇಬ್ಬರು ರೌಡಿಗಳ ಕಾಲುಗಳಿಗೆ ಗಾಯವಾಗಿದ್ದು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳು ಬಳಸುತ್ತಿದ್ದ ಸ್ವಿಫ್ಟ್ ಕಾರನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಹಂದಿ ಮಹೇಶ್ ಎರಡು ಕೊಲೆ ಪ್ರಕರಣಗಳನ್ನು ಎದುರಿಸುತ್ತಿದ್ದು, 29 ವರ್ಷದ ಸತೀಶ್ ಐದು ಅಪರಾಧ ಪ್ರಕರಣಗಳಲ್ಲಿ ಬಾಗಿಯಾಗಿದ್ದಾನೆ.
from India & World News in Kannada | VK Polls https://ift.tt/2uKu1gr