ಗುಜರಾತ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ, ಕೊಲೆ: ನಿರ್ಭಯಾ ರೀತಿಯ ಪ್ರಕರಣಕ್ಕೆ ಭುಗಿಲೆದ್ದ ಆಕ್ರೋಶ

ಅಹಮದಾಬಾದ್‌: ಗುಜರಾತ್‌ನಲ್ಲಿ ಅತ್ಯಾಚಾರ ರೀತಿಯ ಮತ್ತೊಂದು ಪ್ರಕರಣ ನಡೆದಿದೆ. ಉತ್ತರ ಗುಜರಾತ್‌ನ ಮೊಡಾಸಾದಲ್ಲಿ 19 ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ನಡೆದಿದ್ದು, ಬಳಿಕ ಕೊಲೆ ಮಾಡಿ ಆತ್ಮಹತ್ಯೆಯಂತೆ ಬಿಂಬಿಸುವಂತೆ ಮರಕ್ಕೆ ನೇಣು ಹಾಕಿದ್ದಾರೆ. ಈ ಪ್ರಕರಣದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ಹೆಚ್ಚಾಗಿದ್ದು, ಯುವತಿಗೆ ನ್ಯಾಯ ದೊರಕಿಸಿಕೊಡಲು ಟ್ವಿಟ್ಟರ್‌ನಲ್ಲಿ ಆಗ್ರಹಿಸುತ್ತಿದ್ದಾರೆ. ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯರ ಸಮಿತಿ ಬುಧವಾರ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನಾಲ್ಕು ಜನರ ವಿರುದ್ಧ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಪೊಲೀಸರು ದಾಖಲಿಸಿದ ಬಳಿಕವೇ ಶವಪರೀಕ್ಷೆ ನಡೆಸಲು ಯುವತಿಯ ಪೋಷಕರು ಅವಕಾಶ ಮಾಡಿಕೊಟ್ಟರು. ನಾಲ್ವರು ಸಂತ್ರಸ್ತೆಯನ್ನು ಅಪಹರಿಸಿದ ಕಾಮುಕರು, ಕೊಲೆ ಮಾಡುವ ಮೊದಲು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಅಲ್ಲದೆ, ಕೊಲೆ ಮಾಡಿದ ಬಳಿಕ, ಅದನ್ನು ಆತ್ಮಹತ್ಯೆ ಪ್ರಕರಣವಾಗಿಸಲು ಯುವತಿಯ ಶವವನ್ನು ಮರಕ್ಕೆ ನೇಣು ಹಾಕಿದ್ದಾರೆ. ಡಿಸೆಂಬರ್‌ 31ರಂದು ಕಾಣೆಯಾಗಿದ್ದ ಗುಜರಾತ್‌ನ ದಲಿತ ಯುವತಿಯ ಶವ ಕಳೆದ ಭಾನುವಾರ ಪತ್ತೆಯಾಗಿತ್ತು. ಆದರೆ, ಪೊಲೀಸರು ಎಫ್‌ಐಆರ್‌ ದಾಖಲಿಸುವವರೆಗೆ ಶವ ಪರೀಕ್ಷೆ ನಡೆಸಲು ಯುವತಿಯ ಕುಟುಂಬದವರು ಅನುಮತಿ ಕೊಟ್ಟಿರಲಿಲ್ಲ. ನಿರ್ಭಯಾ ರೀತಿಯ ಅತ್ಯಾಚಾರ ಪ್ರಕರಣದ ವಿವರಗಳ ಪ್ರಕಾರ, ಯುವತಿ ನಾಪತ್ತೆಯಾದ ಬಳಿಕ ಆಕೆಯ ಕುಟುಂಬ ಜನವರಿ 3 ರಂದು ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಮನವಿ ಮಾಡಿಕೊಂಡಿದ್ದರು. ಆದರೆ ಸ್ಥಳೀಯ ಪೊಲೀಸರು ಕೇಸ್‌ ದಾಖಲಿಸಿಕೊಳ್ಳಲು ನಿರಾಕರಿಸಿದ್ದರು ಎಂದು ತಿಳಿದುಬಂದಿದೆ. ಅಲ್ಲದೆ, ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ಎನ್.ಎಲ್. ರಬಾರಿ, ಯುವತಿ ಸುರಕ್ಷಿತವಾಗಿದ್ದಾಳೆ ಮತ್ತು ದಲಿತ ಸಮುದಾಯದ ಯುವಕನೊಂದಿಗೆ ಓಡಿಹೋಗಿ ಇಬ್ಬರೂ ಮದುವೆಯಾಗಿದ್ದಾರೆ ಎಂದು ಕುಟುಂಬಕ್ಕೆ ತಿಳಿಸಿದ್ದರು. ಈ ಹಿನ್ನೆಲೆ ಯಾವುದೇ ಪ್ರಕರಣವನ್ನು ದಾಖಲಿಸುವ ಅಗತ್ಯವಿಲ್ಲ ಎಂದಿದ್ದರು ಎನ್ನಲಾಗಿದೆ. ಆದರೆ, ಜನವರಿ 5 ರಂದು ಆಕೆಯ ಶವವು ಮರದ ಮೇಲೆ ನೇತಾಡುತ್ತಿರುವುದು ಕಂಡುಬಂದಿದೆ. ಬಳಿಕ ತನ್ನ ಮಗಳನ್ನು ಕೊಲೆ ಮಾಡಲಾಗಿದೆ ಮತ್ತು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ವಾದಿಸಿ ಕುಟುಂಬ ಸದಸ್ಯರು ಶವವನ್ನು ಸ್ವೀಕರಿಸಲು ನಿರಾಕರಿಸಿದರು. ನಾಲ್ವರ ವಿರುದ್ಧ ಎಫ್‌ಐಆರ್‌ ಮಂಗಳವಾರ, ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಬಿಮಲ್ ಭರದ್, ದರ್ಶನ್ ಭರದ್, ಸತೀಶ್ ಭರದ್ ಮತ್ತು ಜಿಗರ್ ಎಂಬ ನಾಲ್ವರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಮೃತರ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ನಾವು ಎಫ್‌ಐಆರ್ ದಾಖಲಿಸಿದ್ದೇವೆ. ನಮ್ಮ ತನಿಖೆ ನಡೆಯುತ್ತಿದೆ ಎಂದು ಗಾಂಧಿನಗರ ರೇಂಜ್‌ ಇನ್ಸ್‌ಪೆಕ್ಟರ್ ಜನರಲ್ ಮಾಯಾಂಕ್‌ ಸಿನ್ಹ್‌ ಚಾವ್ಡಾ ತಿಳಿಸಿದ್ದಾರೆ. ಇನ್ನೊಂದೆಡೆ ಘಟನೆ ನಡೆದು ಹಲವು ದಿನಗಳು ನಡೆದರೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. #JusticeForKajal ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ಸಹಸ್ರಾರು ಮಂದಿ ಟ್ವೀಟ್‌ ಮಾಡಿದ್ದು ದೇಶಾದ್ಯಂತ ತೀವ್ರ ಆಕ್ರೋಶ ಭುಗಿಲೆದ್ದಿದೆ. ಅಲ್ಲದೆ, ಅತ್ಯಾಚಾರ ನಡೆದ ಗ್ರಾಮದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ.


from India & World News in Kannada | VK Polls https://ift.tt/2tKvOBH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...