ಬೆಂಗಳೂರು: ಜೆಎನ್ಯು ವಿದ್ಯಾರ್ಥಿಗಳ ಮೇಲೆ ಮುಸುಕುಧಾರಿ ಗೂಂಡಾಗಳಿ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಟೀಕೆಗಳಿಗೆ ಗುರಿಯಾಗಿದೆ. "ದೇಶದಲ್ಲಿ ಸುಮಾರು 790 ವಿಶ್ವವಿದ್ಯಾಲಯಗಳಿವೆ. ಬೇರೆ ಯಾವ ವಿಶ್ವವಿದ್ಯಾಲಯದಲ್ಲೂ ಜರುಗದ ವಿವಾದ, ವಿದ್ಯಮಾನ ಜೆ ಎನ್ ಯು ನಲ್ಲಿ ಮಾತ್ರ ಏಕೆ ಜರುಗುತ್ತಿದೆ? ಜೆ ಎನ್ ಯು ಅಲ್ಲಿರುವ ಪಠ್ಯೇತರ ಚಟುವಟಿಕೆಗಳಿಂದಾಗಿಯೇ ಅದಕ್ಕೆ ವಿಶೇಷ ಸ್ಥಾನ-ಮಾನ ಬಂದಿದೆಯೇ? ಎಂದು ಎಸ್.ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ. ಎಲ್ಲ ವಿಶ್ವವಿದ್ಯಾಲಯಗಳೂ ಸಮಾನ, ಜೆಎನ್ಯು ಹೆಚ್ಚು ಸಮಾನ ಎಂಬುದು ಇಂದಿನ ಅಅನಿಮಲ್ ಫಾರ್ಮ್ ನೀತಿ ಎಂದು ಟ್ವೀಟ್ ಮಾಡಿದ್ದಾರೆ. ಸುರೇಶ್ ಕುಮಾರ್ ಅವರ ಟ್ವೀಟ್ಗೆ ಹಲವಾರು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಒಂದು ರಾಜ್ಯದ ಶಿಕ್ಷಣ ಸಚಿವರಾಗಿದ್ದುಕೊಂಡು ಹೀಗೆ ಹಿಂಸೆಯನ್ನು ಪ್ರತಿಪಾದಿಸುವುದು ಸರಿಯಲ್ಲ ಎಂದು ಕಾಲೆಳೆದಿದ್ದಾರೆ. ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮತ್ತೆ ದೇಶಾದ್ಯಂತ ಪ್ರತಿಭಟನೆ ಕಾವು ಹೆಚ್ಚಿದೆ. ದಿಲ್ಲಿಯ ಜೆಎನ್ಯು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹೊಸ ಪೌರತ್ವ ಕಾಯಿದೆ ವಿರೋಧಿ ಪ್ರತಿಭಟಿಸುತ್ತಿದ್ದ ವೇಳೆ, ಜೆಎನ್ಯು ಕಾಲೇಜು ಆರಣಕ್ಕೆ ಮುಸುಕುಧಾರಿ ಗೂಂಡಾಗಳು ನುಗ್ಗಿ ಹಲ್ಲೆ ನಡೆಸಿದ್ದರು. ಇದರಿಂದ ಸುಮಾರು 35 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
from India & World News in Kannada | VK Polls https://ift.tt/2ufGTe3