ಹೊಸದಿಲ್ಲಿ: ಕೇಂದ್ರದ ನೀತಿಯನ್ನು ವಿರೋಧಿಸಿ ವಾಣಿಜ್ಯ ಒಕ್ಕೂಟಗಳು 'ಭಾರತ್ ಬಂದ್' ಗೆ ಕರೆ ನೀಡಿದ್ದಕ್ಕೆ ಕಾಂಗ್ರೆಸ್ ನಾಯಕ ಧನ್ಯವಾದ ತಿಳಿಸಿದ್ದಾರೆ. ಕೇಂದ್ರ ಸರಕಾರವು ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ತೆಗೆದುಕೊಳ್ಳುತ್ತಿದ್ದು, ದೇಶದಲ್ಲಿ ಭೀಕರ ನಿರುದ್ಯೋಗ ಉಂಟಾಗುತ್ತಿದೆ. ಮೋದಿ-ಶಾ ಸರಕಾರ ತೆಗೆದುಕೊಳ್ಳುತ್ತಿರುವ ನೀತಿಗಳಿಂದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳು ಸೊರಗುತ್ತಿದ್ದು, ಬಾಗಿಲು ಮುಚ್ಚುವ ಹಂತಕ್ಕೆ ಬಂದಿವೆ. ಸಾರ್ವಜನಿಕ ಸ್ವಾಮ್ಯದ ವ್ಯಾಪಾರ ವಹಿವಾಟನ್ನೆಲ್ಲ ಮೋದಿ ಸ್ನೇಹಿತರಾದ ಖಾಸಗಿ ಬಂಡವಾಳಶಾಹಿಗಳ ಪಾಲಾಗುವಂತೆ ಮಾಡುತ್ತಿದ್ದಾರೆ. ಇದನ್ನು ವಿರೋಧಿಸಿ ಇಂದು 25 ಕೋಟಿಗೂ ಹೆಚ್ಚು ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಅವರೆಲ್ಲರಿಗೂ ನನ್ನ ಸೆಲ್ಯೂಟ್ ಎಂದು ಟ್ವೀಟ್ ಮಾಡಿದ್ದಾರೆ. ದೇಶದ ವಿವಿಧ 10 ಕಾರ್ಮಿಕ ಸಂಘಟನೆಗಳು ಬುಧವಾರ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿವೆ.
from India & World News in Kannada | VK Polls https://ift.tt/35wRMVX