ಪಶ್ಚಿಮ ಬಂಗಾಳ: ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ, ನಾಲ್ವರ ಸಾವು

ಪರಾಗಣ: ಪಶ್ಚಿಮ ಬಂಗಾಳದ ಉತ್ತರ ಜಿಲ್ಲೆಯ ನೈಹಾತಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದು, ಹಲವಾರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆ ಎಷ್ಟು ಇತ್ತು ಎಂದರೆ, 10 ಕಿಲೋ ಮೀಟರ್‌ವರೆಗೂ ಕಟ್ಟಡಗಳು ಅಲುಗಾಡಿವೆ. ನೈಹಾತಿಯ ದೇಬಕ್‌ ಎಂಬಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಮಧ್ಯಾಹ್ನ ಭಾರಿ ದೊಡ್ಡ ಸ್ಫೋಟ ಸಂಭವಿಸಿತು. ಈ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ ಕೆಲಸ ನಡೆಯುತ್ತಿತ್ತು, ಹಲವಾರು ಕಾರ್ಮಿಕರು ಇದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತೀವ್ರ ಸ್ಫೋಟದಿಂದಾಗಿ 4 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. 10 ಕಾರ್ಮಿಕರು ತೀವ್ರ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಘಟನೆ ನಂತರ ಕಾರ್ಖಾನೆ ಮಾಲೀಕ ನೂರ್‌ ಹಸನ್‌ ಪರಾರಿಯಾಗಿದ್ದಾರೆ. ಪೊಲೀಸರು ನೂರ್‌ಗಾಗಿ ಜಾಲ ಬೀಸಿದ್ದಾರೆ. ಕಳೆದ ವರ್ಷ ಕೂಡ ಇದೇ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿತ್ತು. ಇಲ್ಲಿ ಕೆಲವು ಕಾರ್ಖಾನೆಗಳಲ್ಲಿ ಪಟಾಕಿ ಮಾತ್ರವಲ್ಲ, ಬೇರೆ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗುತ್ತಿದೆ ಎಂದು ಸ್ಥಳೀಯ ನಾಗರಿಕರು ಆರೋಪಿಸಿದ್ದಾರೆ.


from India & World News in Kannada | VK Polls https://ift.tt/39AHyao

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...