ಬಿಜೆಪಿ ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ಸಿಎಎ ಪ್ರತಿಭಟನೆ ವೇಳೆ ಹಿಂಸಾಚಾರವೇಕಿಲ್ಲ: ವಿಪಕ್ಷಗಳಿಗೆ ಅಮಿತ್‌ ಶಾ ಪ್ರಶ್ನೆ

ಹೊಸದಿಲ್ಲಿ: ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ದೇಶಾದ್ಯಂತ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದರು. ಇನ್ನು, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ರಾಜಕೀಯ ಪ್ರೇರಿತವಾಗಿವೆ ಎಂದು ಆರೋಪಿಸಿದರು. ಅಲ್ಲದೆ, ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಹಿಂಸಾಚಾರ ಏಕೆ ನಡೆಯಲಿಲ್ಲ ಎಂದು ಕಾಂಗ್ರೆಸ್‌ಗೆ ಅಮಿತ್‌ ಶಾ ಪ್ರಶ್ನೆ ಮಾಡಿದರು. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಾತ್ರ ಏಕೆ ಹಿಂಸಾಚಾರ ನಡೆಯುತ್ತಿದೆ ಎಂಬುದನ್ನು ವಿಪಕ್ಷಗಳು ಪ್ರಮುಖವಾಗಿ ವಿವರಿಸಬೇಕು ಎಂದೂ ಅಮಿತ್‌ ಶಾ ಮಾಧ್ಯಮ ಶೃಂಗಸಭೆಯಲ್ಲಿ ತಿಳಿಸಿದರು. ಹಿಂಸಾತ್ಮಕ ಪ್ರತಿಭಟನೆಗಳು ಆಯ್ದ ಸ್ಥಳಗಳಲ್ಲಿ ಮಾತ್ರ ನಡೆದಿವೆ. ಅಲ್ಲದೆ, ಹಿಂಸಾಚಾರದ ಹಿಂದೆ ಯಾರಿದ್ದಾರೆ ಎಂಬುದು ದೇಶದ ಜನರಿಗೆ ಚೆನ್ನಾಗಿ ತಿಳಿದಿದೆ ಎಂದು ಅಮಿತ್‌ ಶಾ ಹೇಳಿದರು. ಇನ್ನು, ಹಿಂಸಾಚಾರದಲ್ಲಿ ಪಾಲ್ಗೊಳ್ಳುವವರ ವಿರುದ್ಧ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ಗೃಹ ಸಚಿವರು, ಬಸ್ಸುಗಳು ಸುಟ್ಟುಹೋಗುತ್ತಿದ್ದರೆ ಮತ್ತು ಸಾರ್ವಜನಿಕರ ಆಸ್ತಿ ಪಾಸ್ತಿಗಳಿಗೆ ಬೆಂಕಿ ಹಚ್ಚುತ್ತಿದ್ದರೆ ಪೊಲೀಸರು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ಕಾಂಗ್ರೆಸ್‌ ಹಾಗೂ ಇತರೆ ವಿಪಕ್ಷಗಳಿಗೆ ಬೇರೆ ಯಾವುದೂ ವಿಚಾರಗಳು ಬಾಕಿ ಇಲ್ಲ. ಈ ಹಿನ್ನೆಲೆ ಸಾರ್ವಜನಿಕರ ಮನಸ್ಸಿನಲ್ಲಿ ಭಯ ಹುಟ್ಟಿಸಲು ವಿಪಕ್ಷಗಳು ಪ್ರತಿಭಟನೆಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆರೋಪಿಸಿದರು. ಪೌರತ್ವ ತಿದ್ದುಪಡಿ ಕಾಯ್ದೆ ಪೌರತ್ವ ನೀಡುವುದೇ ಹೊರತು ಕಿತ್ತುಕೊಳ್ಳುವುದಲ್ಲ. ಅಲ್ಲದೆ, ದೇಶಾದ್ಯಂತ ಎನ್‌ಆರ್‌ಸಿ ಪ್ರಕ್ರಿಯೆ ಪರಿಗಣನೆ ಆಗಿಲ್ಲ ಎಂದು ಅಮಿತ್‌ ಶಾ ಸ್ಪಷ್ಟನೆ ನೀಡಿದರು. ಸಿಎಎ ಬಡ ಮತ್ತು ಅಲ್ಪಸಂಖ್ಯಾತರಿಗೆ ಹೇಗೆ ಹಾನಿ ಮಾಡುತ್ತದೆ ಎಂಬುದನ್ನು ವಿವರಿಸುವಂತೆ ಅವರು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರನ್ನು ಅಮಿತ್‌ ಶಾ ಕೇಳಿದರು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಶುದ್ಧ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಹೊಸ ಕಾನೂನಿನಿಂದಾಗಿ ಯಾವುದೇ ಭಾರತೀಯರು ಪೌರತ್ವ ಕಳೆದುಕೊಳ್ಳುವುದಿಲ್ಲ ಎಂದು ನಾನು ಪುನರುಚ್ಚರಿಸುತ್ತೇನೆ ಮತ್ತು ಇದನ್ನು ಜನರಿಗೆ ಅರ್ಥವಾಗುವಂತೆ ನಾವು ದೇಶಾದ್ಯಂತ ಅಭಿಯಾನವನ್ನು ಪ್ರಾರಂಭಿಸಿದ್ದೇವೆ ಎಂದು ಶಾ ಹೇಳಿದರು. ಅಲ್ಲದೆ, ಎನ್‌ಪಿಆರ್‌ ಅನ್ನು ವಿರೋಧಿಸುತ್ತಿರುವ ವಿಪಕ್ಷಗಳ ವಿರುದ್ಧವೂ ಅಮಿತ್‌ ಶಾ ಟೀಕೆ ಮಾಡಿದರು. ಧಾರ್ಮಿಕ ಕಿರುಕುಳದಿಂದ ಪಲಾಯನ ಮಾಡಿದ ಮೂರು ನೆರೆಯ ರಾಷ್ಟ್ರಗಳ ಆರು ಜಾತಿಯ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವುದು ಮಾನದಂಡಗಳ ಪ್ರಕಾರ ಸರಿಯಾಗಿದೆ. ಹಾಗೂ ದೇಶದ ಪ್ರಮುಖ ನಾಯಕರಾದ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ಅವರು ನೀಡಿದ ಭರವಸೆಗಳಿಗೆ ಅನುಸಾರವಾಗಿದೆ ಎಂದು ಅಮಿತ್ ಶಾ ಪ್ರತಿಪಾದಿಸಿದರು. ನೆರೆಯ ದೇಶಗಳ ಅಲ್ಪಸಂಖ್ಯಾತರು ನಮ್ಮ ಜನರು. ವಿಭಜನೆಗೆ ಮುಂಚಿತವಾಗಿ ಅವರು ಭಾರತೀಯರೇ ಆಗಿದ್ದರು. ಅವರು ಬಯಸಿದಾಗಲೆಲ್ಲಾ ಅವರನ್ನು ಭಾರತದಲ್ಲಿ ಸ್ವಾಗತಿಸಲಾಗುವುದು ಎಂದು ಅವರಿಗೆ ಭರವಸೆ ನೀಡಲಾಗಿತ್ತು ಎಂದು ಶಾ ಹೇಳಿದ್ದರು.


from India & World News in Kannada | VK Polls https://ift.tt/2tsaSis

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...