ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಜವಾಹರಲಾಲ್ ನೆಹರೂ ವಿವಿಯಲ್ಲಿ ಭಾನುವಾರ ಸಂಜೆ 50ಕ್ಕೂ ಹೆಚ್ಚು ಮುಸುಕುಧಾರಿ ಗೂಂಡಾಗಳು ಹಲವು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದರು. ಈ ಘಟನೆ ಸಂಬಂಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಇನ್ನೊಂದೆಡೆ, ದೆಹಲಿ ಲೆಫ್ಟಿನೆಂಟ್ ಗವರ್ನರ್ ಜತೆಗೆ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೆಎನ್ಯು ಪ್ರತಿನಿಧಿಗಳಿಗೆ ಕರೆ ಮಾಡಿ ಮಾತುಕತೆ ನಡೆಸುವಂತೆ ಮನವಿ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಎಫ್ಐಆರ್ ದಾಖಲಿಸಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಯುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋಗಳನ್ನು ಪರಿಶೀಲಿಸಿ ತನಿಖೆಗೆ ಬಳಸಿಕೊಳ್ಳುವುದಾಗಿ ದೆಹಲಿಯ ನೈರುತ್ಯ ಡಿಸಿಪಿ ಮಾಹಿತಿ ನೀಡಿದ್ದಾರೆ. ಈ ಸುದ್ದಿ ಓದಿ: ಇನ್ನು, ಭಾನುವಾರ ಸಂಜೆ ನಡೆದ ಘಟನೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಎಲ್ಲ 34 ಗಾಯಾಳು ವಿದ್ಯಾರ್ಥಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಜೆಎನ್ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಶೆ ಘೋಷ್ ಸಹ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಘಟನೆಗೆ ಕಾಂಗ್ರೆಸ್, ಎಡಪಕ್ಷಗಳು ತೀವ್ರ ಖಂಡಿಸಿದ್ದು ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದಿವೆ. ಅಮಿತ್ ಶಾ ರಾಜೀನಾಮೆಗೂ ಆಗ್ರಹ ವ್ಯಕ್ತವಾಗುತ್ತಿದೆ. ಇನ್ನು, ಘಟನೆ ಖಂಡಿಸಿ ಹಲವು ವಿವಿಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ದಾಳಿ ನಡೆದ ಬೆನ್ನಲ್ಲೇ ವಿದ್ಯಾರ್ಥಿನಿಯೊಬ್ಬರು ಕ್ಯಾಂಪಸ್ ಬಿಟ್ಟು ತೆರಳಿದ್ದಾರೆ. ಇನ್ನು, ಭಾನುವಾರ ಸಂಜೆ ಮುಸುಕುಧಾರಿ ಗೂಂಡಾಗಳಿಂದ ದಾಳಿ ಬೆನ್ನಲ್ಲೇ ದೆಹಲಿಯ ಪ್ರಖ್ಯಾತ ಜವಾಹರಲಾಲ್ ನೆಹರೂ ವಿವಿಗೆ ಭದ್ರತೆ ಹೆಚ್ಚಿಸಲಾಗಿದೆ.
from India & World News in Kannada | VK Polls https://ift.tt/3018CLy