ಸಿಎಎ, ಎನ್‌ಆರ್‌ಸಿಗೆ ಬೆಂಬಲ: ಗೋವಾದಲ್ಲಿ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ನಾಲ್ವರು ನಾಯಕರು

ಪಣಜಿ: ಹಾಗೂ ಪ್ರಸ್ತಾವಿತ ವಿರೋಧಿಸಿ ಹಾಗೂ ಹಲವು ವಿರೋಧ ಪಕ್ಷಗಳು ದೇಶಾದ್ಯಂತ ಪ್ರತಿಭನೆ ನಡೆಸುತ್ತಿವೆ. ಆದರೆ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಗೋವಾದ ನಾಲ್ವರು ಕಾಂಗ್ರೆಸ್‌ ನಾಯಕರು ಪಕ್ಷದ ನಿಲುವಿಗೆ ವಿರೋಧಿಸಿ ರಾಜೀನಾಮೆ ನೀಡಿದ್ದಾರೆ. ಪಣಜಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪ್ರಸಾದ್‌ ಅಮೋನ್ಕರ್‌, ಉತ್ತರ ಗೋವಾದ ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥ ಜಾವೇದ್‌ ಶೇಖ್‌, ಬ್ಲಾಕ್‌ ಸಮಿತಿಯ ಕಾರ್ಯದರ್ಶಿ ದಿನೇಶ್‌ ಕುಬಲ್‌ ಹಾಗೂ ಮಾಜಿ ಯುವ ನಾಯಕ ಶಿವರಾಜ್‌ ತಾರ್ಕರ್ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಎಲ್ಲರೂ ಪೌರತ್ವ ತಿದ್ದುಪಡಿ ಕಾಯ್ದೆಗೆ ಪರವಾಗಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಈ ಸಂಬಂಧ ಪಣಜಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅಮೋನ್ಕರ್‌ ಕಾಂಗ್ರೆಸ್‌ ವಿರುದ್ಧ ಆರೋಪ ಮಾಡಿದ್ದಾರೆ. ಕೈ ಪಕ್ಷ ಸಾರ್ವಜನಿಕರನ್ನು ಪ್ರಮುಖವಾಗಿ ಅಲ್ಪಸಂಖ್ಯಾತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಮಾತನಾಡಿದ್ದಾರೆ. ಅಲ್ಲದೆ, ಸಿಎಎ ಮತ್ತು ಎನ್‌ಆರ್‌ಸಿ ಬಗ್ಗೆ ಕಾಂಗ್ರೆಸ್ ಕೈಗೊಂಡ ತಪ್ಪು ನಿಲುವನ್ನು ನಾವು ವಿರೋಧಿಸುತ್ತೇವೆ. ಪ್ರತಿಪಕ್ಷವಾಗಿ, ನಾವು ವಿಮರ್ಶಾತ್ಮಕವಾಗಿರಬೇಕು ಮತ್ತು ವಿರೋಧಿಸುವ ಸಲುವಾಗಿಯೇ ಏನನ್ನಾದರೂ ವಿರೋಧಿಸಬಾರದು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸ್ವಾಗತಿಸಬೇಕಾಗಿದೆ ಎಂದು ಹೇಳಿಕೊಂಡಿದ್ದಾರೆ. ಜತೆಗೆ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್‌ ಜನರನ್ನು ತಪ್ಪು ದಾರಿಗೆ ಎಳೆಯುವುದನ್ನು ಹಾಗೂ ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಭಯ ಹುಟ್ಟಿಸುವುದನ್ನು ನಿಲ್ಲಿಸಬೇಕು ಎಂದೂ ಅಮೋನ್ಕರ್‌ ಆರೋಪಿಸಿದ್ದಾರೆ. ನಾವೆಲ್ಲರೂ ಕಳೆದ ವಾರ ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧದ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೆವು. ಆದರೆ, ನಾಯಕರ ಭಾಷಣಗಳ ಮೂಲಕ ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಭಯ ಹುಟ್ಟಿಸುತ್ತಿದ್ದಾರೆ ಎಂಬುದನ್ನು ನಾವು ಅರಿತುಕೊಂಡೆವು. ಇದು ಸರಿಯಲ್ಲ. ಇನ್ನು, ಗೋವಾ ಶಾಂತಿ ಪ್ರಿಯ ರಾಜ್ಯವಾಗಿದ್ದು ಕಾಂಗ್ರೆಸ್‌ ಅಲ್ಪಸಂಖ್ಯಾತರನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ ಎಂದೂ ಪ್ರಸಾದ್‌ ಅಮೋನ್ಕರ್ ಆರೋಪಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಜಾಪ್ರಭುತ್ವ ಪ್ರಕ್ರಿಯೆಯ ಮೂಲಕ ಜಾರಿಗೆ ತರಲಾಗಿದ್ದು, ಭಾರತೀಯ ನೀತಿಯೊಂದಿಗೆ ಶತಮಾನಗಳ ಸಾಂಸ್ಕೃತಿಕ ಒಲವು ಹೊಂದಿರುವ ನಿರಾಶ್ರಿತರಿಗೆ ಪೌರತ್ವ ನೀಡಲು ಯತ್ನಿಸಲಾಗಿದೆ ಎಂದರು. "ಸಿಎಎ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಕಳವಳಗಳನ್ನು ಪರಿಹರಿಸುತ್ತದೆ. ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಬಯಸುವ ಆ ದೇಶಗಳಲ್ಲಿನ ಬಹುಸಂಖ್ಯಾತ ಸಮುದಾಯದ ಸದಸ್ಯರಿಗೂ ಈಗಿರುವ ನಿಬಂಧನೆಗಳ ಪ್ರಕಾರ ಸಾಧ್ಯವಾಗುತ್ತದೆ" ಎಂದು ಅವರು ಹೇಳಿದರು. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದ್ದು, ಇದನ್ನು ಅಸಂವಿಧಾನಿಕ ಎಂದು ಗೋವಾ ಕಾಂಗ್ರೆಸ್‌ ಪಕ್ಷಕ್ಕೆ ಪ್ರಸಾದ್‌ ಅಮೋನ್ಕರ್ ಆರೋಪಿಸಿದರು.


from India & World News in Kannada | VK Polls https://ift.tt/37s4eHH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...