‘ಸಿದ್ಧರಾಮಯ್ಯ ದಿವಾಳಿಯೆದ್ದ ಮನಸ್ಸಿನ ಸಾಕ್ಷಿ ಪ್ರಜ್ಞೆ’ ಅನಂತ್ ಕುಮಾರ್ ಹೆಗಡೆ ಕಿಡಿ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ವಿರುದ್ಧ ವಿರೋಧ ಪಕ್ಷದ ನಾಯಕ ಕಿಡಿಕಾರಿದ್ದರು. ಇದರ ಬೆನ್ನಲ್ಲೇ ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯಗೆ ಅನಂತ್ ಕುಮಾರ್ ಹೆಗಡೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ‘ಮತ್ತೆ ಮತ್ತೆ ಸಾವರ್ಕರ್’ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ಸೌಮ್ಯವಾದಿ ಹಾಗೂ ಅಹಿಂಸಾತ್ಮಕವಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪರೋಕ್ಷವಾಗಿ ಮಹಾತ್ಮ ಗಾಂಧಿಯ ಹೋರಾಟದ ವಿಧಾನವನ್ನು ಅನಂತ್ ಕುಮಾರ್ ಹೆಗಡೆ ಟೀಕಿಸಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಮೈಸೂರಿನಲ್ಲಿ ಮಾತನಾಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗೋಡ್ಸೆ ಹಾಗೂ ಸಾವರ್ಕರ್‌ ಪೂಜೆ ಮಾಡುವವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಕಿಡಿಕಾರಿದ್ದರು. ಅಲ್ಲದೆ, ಅನಂತ್ ಕುಮಾರ್ ಹೆಗಡೆ ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿದ್ದನಾ? ಸ್ವಾತಂತ್ರ್ಯ ಹೋರಾಟದ ಬಗ್ಗೆ ಇವನಿಗೇನು ಗೊತ್ತು. ನಾನು ಆಗಸ್ಟ್‌ 3, 1947 ರಂದು ಹುಟ್ಟಿದ್ದೇನೆ ಎಂದಿದ್ದ ಸಿದ್ದರಾಮಯ್ಯ ಹೆಗಡೆ ಸ್ವಾತಂತ್ರ್ಯ ಹೋರಾಟದಲ್ಲಿ ಬಲಿದಾನ ಆದವರ ಹೆಸರು ಹೇಳಲಿ ನೋಡೋಣ ಎಂದು ಸವಾಲು ಹಾಕಿದ್ದರು. ಇನ್ನು ಸ್ವಾತಂತ್ರ್ಯ ಬಂದ ದಿನಕ್ಕೆ 12 ರ ಹಸಿಗೂಸಿನ ಈತ, ಸ್ವಾತಂತ್ರ್ಯದ ಬಗ್ಗೆ ಮಾತನಾಡಲು ಅದನ್ನೇ ಅರ್ಹತೆಯೆಂದು ತಿಳಿದಿದ್ದರೆ, ಈ ಸಿದ್ಧಣ್ಣನನ್ನು ದಿವಾಳಿಯೆದ್ದ ಮನಸ್ಸಿನ ಸಾಕ್ಷಿ ಪ್ರಜ್ಞೆ ಎನ್ನಬಹುದಲ್ಲವೇ? ಇದಕ್ಕೆ ಇದೀಗ ಟ್ವಿಟ್ಟರ್‌ನಲ್ಲಿ ಉತ್ತರಿಸಿರುವ ಸಂಸದ ಹೆಗಡೆ, ಸಿಎಎ ಬಗ್ಗೆ ಹುಟ್ಟಿನ ದಾಖಲೆ ನೀಡಲು ಆಗುವುದಿಲ್ಲವೆಂದ ಈ ಸಿದ್ದಣ್ಣ ಈಗ ತನ್ನೆಲ್ಲ ದಾಖಲೆಗಳನ್ನು ಸರಿ ಮಾಡಿಸಿಕೊಂಡು ಒದರಲಿಕ್ಕೆ ಪ್ರಾರಂಭಿಸಿರುವುದು, ಪ್ರಧಾನಿ ಮೋದಿಯವರು ತೆಗೆದುಕೊಂಡ ಕ್ರಮ ಸಾರ್ಥಕವಾಯ್ತಲ್ಲವೇ? ಎಂದಿದ್ದಾರೆ.


from India & World News in Kannada | VK Polls https://ift.tt/2GKGjIt

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...