ಪ್ರಯಾಗ್ರಾಜ್: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ 2019ರಲ್ಲಿ ಕಾನೂನು ವಿದ್ಯಾರ್ಥಿನಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಚಿನ್ಮಯಾನಂದ ಅವರನ್ನು ಬಂಧಿಸಲಾಗಿತ್ತು. ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಕಾನೂನು ಪದವಿಗಾಗಿ ಪ್ರವೇಶ ಪಡೆದ ಸಂದರ್ಭದಲ್ಲಿ ಸ್ವಾಮಿ ಚಿನ್ಮಯಾನಂದ ನನಗೆ ಕೆಲಸ ನೀಡುವ ಭರವಸೆ ನೀಡಿದರು. ಅಂದು ಕತ್ತಲಾಗುವವರೆಗೂ ನಾನು ಕಾಲೇಜಿನಲ್ಲೇ ಇರಬೇಕಾದ ಅನಿವಾರ್ಯತೆ ಸೃಷ್ಟಿಸಿದರು. ಬಳಿಕ ಕಾಲೇಜು ಸಿಬ್ಬಂದಿಯ ಬಲವಂತದ ಮೇರೆಗೆ ನಾನು ಹಾಸ್ಟೇಲ್ನಲ್ಲಿಯೇ ಉಳಿದುಕೊಂಡೆ. ಈ ವೇಲೆ ನಾನು ಸೇರಿದಂತೆ ಹಲವು ವಿದ್ಯಾರ್ಥಿನಿಯರ ಮೇಲೆ ಚಿನ್ಮಯಾನಂದ ಲೈಂಗಿಕ ದೌರ್ಜನ್ಯ ಎಸಗಿದರು. ಆದರೆ, ಈ ಸಂಬಂಧ ನಾನೊಬ್ಬಳೆ ಧ್ವನಿ ಎತ್ತುವ ಧೈರ್ಯ ತೆಗೆದುಕೊಂಡೆ ಎನ್ನುವುದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
from India & World News in Kannada | VK Polls https://ift.tt/2GPH3fk