ದಾವಣಗೆರೆ: ವಿಚಾರವಾಗಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿರೋದಾಗಿ ನೀರಾವರಿ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26ರಂದು ಕೇಂದ್ರ ಸಚಿವರನ್ನೂ ಭೇಟಿಯಾಗೋದಾಗಿ ರಮೇಶ್ ಮಾಹಿತಿ ನೀಡಿದ್ದಾರೆ. ಮಹದಾಯಿ ಯೋಜನೆ ಸಂಬಂಧ ಆದಷ್ಟು ಬೇಗ ಗೆಜೆಟ್ ನೋಟಿಫಿಕೇಷನ್ ಹೊರಡಿಸುವಂತೆ ಒತ್ತಡ ಹೇರುತ್ತೇವೆ ಎಂದು ತಿಳಿಸಿದರು. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಜಾರಕಿಹೊಳಿ, ಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ, ಆದ್ರೆ ತಾಂತ್ರಿಕ ಕಾರಣಗಳಿವೆ. ಅವುಗಳನ್ನೆಲ್ಲಾ ಹೇಳೋದಕ್ಕೆ ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ಮಾತನಾಡಿದರು. ನಮ್ಮ ಸರ್ಕಾರ ಇರುವಾಗಲೇ ಆದಷ್ಟು ಬೇಗ ಯೋಜನೆ ಜಾರಿಗೆ ತರುತ್ತೇವೆ ಎಂದು ಹೇಳಿದ ಜಾರಕಿಹೊಳಿ, ಆದಷ್ಟು ಬೇಗ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದೇವೆ ಎಂದರು. ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿಗೆ ಸ್ಪಷ್ಟನೆ ನೀಡಿದ ಜಾರಕಿಹೊಳಿ, ನಾನು ರಾಜೀನಾಮೆ ನೀಡುತ್ತೇನೆ ಎನ್ನುವ ಹೇಳಿಕೆಯನ್ನೇ ನೀಡಿಲ್ಲ, ಸುಮ್ಮನೆ ಗೊಂದಲ ಮಾಡಬೇಡಿ ಎಂದು ತಿರುಗೇಟು ಕೊಟ್ಟರು. ನಾನು ಈ ಸಂಬಂಧ ಯಾರಿಗೆ ಸ್ಪಷ್ಟೀಕರಣ ನೀಡಬೇಕೋ ಅವರಿಗೆ ನೀಡುತ್ತೇನೆ, ಮಾಧ್ಯಮಗಳ ಮುಂದೆ ನಾನು ಏನನ್ನೂ ಹೇಳುವುದಿಲ್ಲ ಎಂದರು. ನೀರಾವರಿ ಇಲಾಖೆ ವಿಚಾರದಲ್ಲಿ ನಾನು ಎಲ್ಲರ ಸಲಹೆ ಪಡೆಯುತ್ತೇನೆ ಎಂದ ರಮೇಶ್ ಜಾರಕಿಹೊಳಿ, ಹೆಚ್ ಕೆ ಪಾಟೀಲ್ ಅವರ ಮಾರ್ಗದರ್ಶನವನ್ನೂ ಪಡೆಯುತ್ತೇನೆ ಎಂದರು. ಇನ್ನು ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೊಟ್ಟ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುತ್ತದೆ, ಈಗ ನಿಗಮ ಕೊಟ್ಟರೆ ಸಂತೋಷವಾಗುತ್ತದೆ ಎಂದರು.
from India & World News in Kannada | VK Polls https://ift.tt/39YVme5