ಈಗ ಹೇಗಿದ್ದಾನೆ ರವಿ ಪೂಜಾರಿ? ಬೆಂಗಳೂರಿಗೆ ಎಳೆದು ತರುತ್ತಿರುವುದರಿಂದ ಆತನನ್ನು ನೋಡಲು ಹೆಚ್ಚಿದ ಕಾತುರ!

ಬೆಂಗಳೂರು: 26 ವರ್ಷಗಳ ಬಳಿಕ ಪೊಲೀಸ್‌ ಬಲೆಗೆ ಬಿದ್ದಿರುವ ರವಿ ಪೂಜಾರಿಯನ್ನು ಸೋಮವಾರ ಬೆಳಗಿನ ಜಾವ ಬೆಂಗಳೂರಿಗೆ ಕರೆ ತರಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈಗಾಗಲೇ ಸಿಸಿಬಿ ಇನ್ಸ್‌ಪೆಕ್ಟರ್‌ ಮಹೇಶ್‌ ಬೋಳೆತ್ತಿನ್‌ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್‌ಕುಮಾರ್‌ ಪಾಂಡೆ ಬೆಂಗಳೂರಿನಿಂದ ತೆರಳಿದ್ದಾರೆ. ರವಿ ಪೂಜಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಭಾರತೀಯ ಪೊಲೀಸರ ವಶದಲ್ಲೇ ಇರುವ ಪೂಜಾರಿಯನ್ನು ಭಾನುವಾರ ತಡರಾತ್ರಿ ದಿಲ್ಲಿಗೆ ಕರೆತಂದು ದಿಲ್ಲಿಯಿಂದಲೇ ಬೆಂಗಳೂರಿಗೆ ಕರೆತರಲು ಯೋಜನೆ ರೂಪಿಸಲಾಗಿದೆ. 26 ವರ್ಷಗಳ ಹಿಂದಿನ ಫೋಟೊಗಳಷ್ಟೇ ಇದುವರೆಗೆ ಲಭ್ಯವಾಗಿದ್ದು, ಇದೀಗ ಹೇಗಿದ್ದಾನೆ ಎಂದು ನೋಡಲು ಕಾತುರ ಹೆಚ್ಚಿದೆ. ಒಟ್ಟಿನಲ್ಲಿ ಸೋಮವಾರ ರವಿ ಪೂಜಾರಿಯ ಬಂಧನ ಪ್ರಕ್ರಿಯೆಯನ್ನು ಬೆಂಗಳೂರು ಪೊಲೀಸರು ಪೂರ್ಣಗೊಳಿಸಲಿದ್ದಾರೆ. ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಕೊಡುವ ಸೂಚನೆಯಂತೆ ತನಿಖಾ ತಂಡ ಮುಂದುವರಿಯಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 1992ರಿಂದ ಭೂಗತನಾಗಿದ್ದ ರವಿ ಪೂಜಾರಿಯ ನೆರಳನ್ನು ಬೆನ್ನತ್ತಿದ್ದ ಹಾಲಿ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್‌ ಕುಮಾರ್‌ ಪಾಂಡೆ ಮತ್ತು ಸಿಸಿಬಿ ಎಸಿಪಿ ವೆಂಕಟೇಶ್‌ ಪ್ರಸನ್ನ ಅವರ ಒಂದು ವರ್ಷದ ಶ್ರಮ ಕೊನೆಗೆ ಫಲ ನೀಡಿದೆ. ಕಳೆದ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ರಾಜ್ಯ ಗುಪ್ತಚರ ಇಲಾಖೆ ಎಡಿಜಿಪಿ ಆಗಿದ್ದ ಅಮರ್‌ಕುಮಾರ್‌ ಪಾಂಡೆ, ಎಸಿಪಿ ಪ್ರಸನ್ನ ಕೊಟ್ಟ ಮಾಹಿತಿ ಆಧರಿಸಿ 2019ರ ಜನವರಿ 31ರಂದು ಸೆನೆಗಲ್‌ ರಾಜಧಾನಿ ಡಕಾರ್‌ನಲ್ಲಿ ರವಿ ಪೂಜಾರಿಯ ಬಂಧನ ಆಗುವಂತೆ ನೋಡಿಕೊಂಡರು. ಆದರೆ ನಂತರದ ಬೆಳವಣಿಗೆಯಲ್ಲಿ ಆತನನ್ನು ಭಾರತಕ್ಕೆ ಕರೆತರುವ ಪ್ರಯತ್ನಕ್ಕೆ ಹಿನ್ನಡೆಯಾಗಿತ್ತು.


from India & World News in Kannada | VK Polls https://ift.tt/3c65zr8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...