ಹೊಸದಿಲ್ಲಿ: ಅವರ ಸ್ವಾತಂತ್ರ್ಯ ಹೋರಾಟವನ್ನು 'ಒಂದು ನಾಟಕ' ಎಂದು ಜರೆಯುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದ ಸಂಸದ ಅನಂತಕುಮಾರ್ ಹೆಗಡೆಗೆ ಭೇಷರತ್ ಕ್ಷಮೆ ಕೇಳುವಂತೆ ಬಿಜೆಪಿ ಹೈಕಮಾಂಡ್ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ''ಇತಿಹಾಸದ ಪ್ರಕಾರ ಉಪವಾಸಕ್ಕೆ ಹೆದರಿ ಬ್ರಿಟಿಷರು ದೇಶ ಬಿಟ್ಟು ಹೋದರು ಎನ್ನುತ್ತದೆ. ಇದನ್ನು ಕೇಳಿದರೆ ತಣ್ಣಗಿರುವ ರಕ್ತ ಹೆಪ್ಪುಗಟ್ಟಿ ಹೋಗುತ್ತದೆ'' ಎಂದಿದ್ದರು. ಮಹಾತ್ಮ ಗಾಂಧಿ ಅವರ ಹೆಸರನ್ನು ಬಳಸದೆ ಪರೋಕ್ಷವಾಗಿ ಅಹಿಸ್ಮಾ ಹೋರಾಟವನ್ನು ಟೀಕಿಸಿದ್ದರು. ''ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ತೋರಿಸುವ ಸೋಗಲಾಡಿ ಸಿದ್ಧಾಂತವನ್ನು ನಾವು ಒಪ್ಪಿಕೊಳ್ಳುವುದಿಲ್ಲ'' ಎಂದಿದ್ದರು. ''ಸ್ವಾತಂತ್ರ್ಯ ಹೋರಾಟದಲ್ಲಿ ಮೂರು ವಿಧಗಳಿದ್ದು, ಚಂದ್ರಶೇಖರ್ ಆಜಾದ್ ಹಾಗೂ ಭಗತ್ ಸಿಂಗ್ ಅವರಂತಹ ಕ್ರಾಂತಿಕಾರಿಗಳು ಶಸ್ತ್ರಸಜ್ಜಿತರಾಗಿ ಹೋರಾಟ ಮಾಡಿದರು. ಮತ್ತೊಂದ ವರ್ಗ ಪ್ರಖರ ರಾಷ್ಟ್ರೀಯ ವಿಚಾರಗಳೊಂದಿಗೆ ಶಿವಾಜಿ, ಹಕ್ಕ, ಬುಕ್ಕರಂತಹ ನಾರಾರು ಮಂದಿಯನ್ನು ಮುಂದಕ್ಕೆ ತಂದರು. ಇನ್ನು ಮೂರನೇ ವರ್ಗ ಬ್ರಿಟಿಷರ ಬಳಿ ಹೇಗೆ ಹೋರಾಟ ಮಾಡಬೇಕು ಎಂದು ಕೇಳಿ, ಅವರ ಜೊತೆ ಹೊಂದಾಣಿಕೆ ಮಾಡಿಕೊಂಡರು. ಸ್ವಾತಂತ್ರ್ಯ ಹೋರಾಟದಲ್ಲಿ ಲಾಠಿ ಏಟು ತಿನ್ನದವರನ್ನು ಇತಿಹಾಸದ ಪುಟದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಎಂದು ಬಿಂಬಿಸಲಾಗುತ್ತಿದೆ'' ಎಂದು ಅಹಿಂಸಾ ಹೋರಾಟಗಾರರನ್ನು ಟೀಕಿಸಿದ್ದರು.
from India & World News in Kannada | VK Polls https://ift.tt/36T77k4