ಎಚ್‌ಡಿಕೆ ಸರಕಾರ ಉರುಳಿಸಲು ಪ್ರಮುಖ ಪಾತ್ರ ವಹಿಸಿದ್ದೇ ಯೋಗೀಶ್ವರ್‌ಗೆ ಮಂತ್ರಿಯಾಗಲು ಯೋಗ?

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಸರಕಾರ ಉರುಳಿಸುವಲ್ಲಿ ಸಿ ಪಿ ಯೋಗೀಶ್ವರ್‌ ಮಹತ್ವದ ಪಾತ್ರ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್‌ ಅವರಿಗೆ ಸಚಿವ ಹುದ್ದೆ ನೀಡಲು ಮುಂದಾಗಿದೆ. ಯಾರೆಷ್ಟೇ ವಿರೋಧ ವ್ಯಕ್ತಪಡಿಸಿದರೂ ಅವರು ಸಚಿವರಾಗುವುದು ಖಚಿತ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಬಿಜೆಪಿಯಲ್ಲಿ 120 ಜನ ಸೋತಿದ್ದಾರೆ. ಹಾಗಾದರೆ ಅವರಿಗೆಲ್ಲ ಅಧಿಕಾರ ನೀಡಲು ಸಾಧ್ಯವೆ? ಸೋತವರಿಗೆ ಆದ್ಯತೆ ನೀಡುವುದಾದರೆ ಎಚ್‌.ವಿಶ್ವನಾಥ್‌, ಎಂ.ಟಿ.ಬಿ.ನಾಗರಾಜ್‌ಗೆ ನೀಡಿ. ಅವರು ಸರಕಾರ ರಚನೆಗೆ ತ್ಯಾಗ ಮಾಡಿದ್ದಾರೆ. ಆದರೆ ಯೋಗೀಶ್ವರ್‌ಗೆ ಬೇಡ. ಒಂದು ವೇಳೆ ಅವರಿಗೆ ಅವಕಾಶ ಕಲ್ಪಿಸುವುದಾದರೆ ರಾಜ್ಯಸಭೆ ಸದಸ್ಯರನ್ನಾಗಿ ಮಾಡಿ ಎಂದು ಬೆಂಗಳೂರಿನಲ್ಲಿ ಮೂಲ ಬಿಜೆಪಿಗರು ಗುಂಪು ನಡೆಸಿದ ಪ್ರತ್ಯೇಕ ಸಭೆಯಲ್ಲಿ ಆಗ್ರಹಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಶಾಸಕರ ಜತೆಗೆ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಶ್‌ ಬೆಂಬಲ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇಂದೂ ಸಭೆ ಪ್ರಾತಿನಿಧ್ಯ ಹಾಗೂ ಯೋಗೀಶ್ವರ್‌ಗೆ ಸಚಿವ ಸ್ಥಾನ ನೀಡುವುದನ್ನು ವಿರೋಧಿಸಿ ಮಂಗಳವಾರವೂ ಸಭೆ ನಡೆಯಲಿದೆ. ಈಗಿರುವ ಶಾಸಕರ ಜತೆಗೆ ಇನ್ನಷ್ಟು ಜನರು ಸೇರಿಕೊಳ್ಳಲಿದ್ದು, ಸೋತವರಿಗೆ ಅಧಿಕಾರ ಬೇಡ ಎಂಬ ಕೂಗಿಗೆ ಬಲ ತುಂಬಲು ನಿರ್ಧರಿಸಿದ್ದಾರೆ. ಆ ಬಳಿಕ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಕಟೀಲ್‌ ಭೇಟಿ ಮಾಡಿ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಅತೃಪ್ತ ಶಾಸಕರ ಸಭೆ ಬಗ್ಗೆ ಮಾತನಾಡುವುದಿಲ್ಲ. ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೂಡ ನೀಡುವುದಿಲ್ಲ. - ಬಿ.ಎಸ್‌.ಯಡಿಯೂರಪ್ಪ, ಸಿಎಂ ಸವದಿಗೆ ಡಿಸಿಎಂ ಹುದ್ದೆ ನೀಡಿದ್ದು ಹೈಕಮಾಂಡ್‌ ನಿರ್ಧಾರ. ಆದರೆ ಈಗ ಯೋಗೀಶ್ವರ್‌ಗೆ ಕೊಡುತ್ತಿರುವುದು ಸರಿಯಲ್ಲ. ಬಿಜೆಪಿಯಿಂದ ನಾವು 105 ಜನ ಗೆದ್ದಿದ್ದೇವೆ. ಗೆದ್ದವರನ್ನಷ್ಟೇ ಪರಿಗಣಿಸಲಿ. ಇದು ಪಕ್ಷ ವಿರೋಧಿ ಸಭೆಯಲ್ಲ. - ರಾಜುಗೌಡ, ಸುರಪುರ ಶಾಸಕ ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗಕ್ಕೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ನಾವೆಲ್ಲ ಸಭೆ ಮಾಡಿ ಚರ್ಚೆ ನಡೆಸಿದ್ದೇವೆ. ಗೆದ್ದವರಿಗಷ್ಟೇ ಸಚಿವ ಸ್ಥಾನ ನೀಡಬೇಕೆಂಬುದು ನಮ್ಮ ಮನವಿ. - ಎಂ.ಪಿ.ರೇಣುಕಾಚಾರ್ಯ, ಸಿಎಂ ರಾಜಕೀಯ ಕಾರ್ಯದರ್ಶಿ ಬೇಡಿಕೆ ಏನು?ಸಭೆಯಲ್ಲಿ ಭಾಗಿಯಾದವರ ಪೈಕಿ ಹೆಚ್ಚಿನವರು ಕಲ್ಯಾಣ ಹಾಗೂ ಮಧ್ಯ ಕರ್ನಾಟಕ ಭಾಗಕ್ಕೆ ಸೇರಿದವರಾಗಿದ್ದು, ಪ್ರಾದೇಶಿಕ ಅಸಮತೋಲನ ನಿವಾರಿಸಲು ತಮ್ಮ ಭಾಗಕ್ಕೆ ಆದ್ಯತೆ ನೀಡಲು ಆಗ್ರಹಿಸಿದ್ದಾರೆ. ಬೆಂಗಳೂರು, ಬೆಳಗಾವಿ ಹೊರತುಪಡಿಸಿದರೆ ಕರಾವಳಿ, ಮಧ್ಯ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಯಾವುದೇ ಪ್ರಾತಿನಿಧ್ಯ ನೀಡಿಲ್ಲ. ಆದರೆ ಈ ಭಾಗದಲ್ಲೇ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದೆ. ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯಂಥ ನಾಯಕರನ್ನು ಸೋಲಿಸಿ ಇತಿಹಾಸ ನಿರ್ಮಿಸಲಾಗಿದೆ. ಹೀಗಿರುವಾಗ ನಮ್ಮ ಭಾಗದ ಶಾಸಕರಿಗ್ಯಾಕೆ ಸಚಿವ ಸ್ಥಾನವಿಲ್ಲಎಂಬ ಪ್ರಶ್ನೆಯನ್ನು ಮುಂದಿಡಲಾಗಿದೆ.


from India & World News in Kannada | VK Polls https://ift.tt/2UjVdNL

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...