ಹೊಸದಿಲ್ಲಿ: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಗುರುದ್ವಾರದಲ್ಲಿ ನಡೆಯುತ್ತಿದ್ದ ಸಿಖ್ಖರ ಧಾರ್ಮಿಕ ಸಮಾರಂಭಕ್ಕೆ ನುಗ್ಗಿದ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಈ ದಾಳಿಯಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಬುಧವಾರ ಬೆಳಗ್ಗೆ ಅಫ್ಘಾನಿಸ್ತಾನದಲ್ಲಿ ಈ ಘಟನೆ ನಡೆದಿದೆ. ಕಾಬೂಲ್ನಲ್ಲಿ ಸಿಖ್ ಧಾರ್ಮಿಕ ಕೇಂದ್ರವಾಗಿರುವ ಗುರುದ್ವಾರದಲ್ಲಿ ಗುಂಡಿನ ದಾಳಿ ನಡೆದಿದ್ದಷ್ಟೇ ಅಲ್ಲದೆ, ಓರ್ವ ಆತ್ಮಾಹುತಿ ದಾಳಿ ನಡೆಸಿದ್ದಾನೆ. ಕಾಬೂಲ್ನಲ್ಲಿ ಬೆಳಗ್ಗೆ 7.45ಕ್ಕೆ ನಡೆದ ದಾಳಿಯಲ್ಲಿ ಹಲವಾರು ಜನ ಸಾವನ್ನಪ್ಪಿದ್ದಾರೆ. ಸುಮಾರು 150 ಕ್ಕೂ ಹೆಚ್ಚು ಮಂದಿ ಆ ಕಟ್ಟಡದೊಳಗೆ ಸಿಲುಕಿಕೊಂಡಿದ್ದು, ಅವರನ್ನು ಸುರಕ್ಷಿತವಾಗಿ ಹೊರಗೆ ಕರೆತರುವ ಕಾರ್ಯ ನಡೆಯುತ್ತಿದೆ. ಧರ್ಮಶಾಲಾದಲ್ಲಿ ಸಿಖ್ ಭಕ್ತರು ನೂರಾರು ಸಂಖ್ಯೆಯಲ್ಲಿ ಸೇರಿದ್ದಾಗಲೇ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ. ಕಳೆದ ತಿಂಗಳು ಇಲ್ಲಿ ಐಸಿಸ್ ಸಂಘಟನೆಯ ಉಗ್ರರು ಶಿಯಾ ಮುಸ್ಲಿಮರ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 32 ಜನರು ಸಾವನ್ನಪ್ಪಿದ್ದರು. ಕಾಬೂಲ್ನ ಗುರುದ್ವಾರ ಸಾಹಿಬ್ ಮೇಲೆ ನಡೆದಿರುವ ಖಂಡನೀಯ. ಕೆಲ ದೇಶಗಳಲ್ಲಿನ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ನಡೆಯುತ್ತಿರುವ ಈ ರೀತಿಯ ದೌರ್ಜನ್ಯಗಳು ಮರುಕಳಿಸುತ್ತಲೇ ಇವೆ. ಅವರ ಜೀವನ ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ಕಾಪಾಡಬೇಕಾದ ತುರ್ತು ಎದುರಾಗಿದೆ" ಎಂದು ನಾಗರಿಕ ವಿಮಾನಯಾನ ಸಚಿಯ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.
from India & World News in Kannada | VK Polls https://ift.tt/33Huc9J