ಹೊಸದಿಲ್ಲಿ: ಸೋಂಕು ಕ್ಷಿಪ್ರ ಗತಿಯಲ್ಲಿ ಹರಡುತ್ತಿರುವುದರಿಂದ ಪರಿಸ್ಥಿತಿ ಕೈ ಮೀರಿದ್ದು, ಇದನ್ನು ನಿಯಂತ್ರಿಸಲು ಕೇಂದ್ರ ಸರಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಇದರಂತೆ ಮಾರ್ಚ್ 24 ಮಧ್ಯರಾತ್ರಿಯಿಂದ 21 ದಿನಗಳ ಕಾಲ ದೇಶವನ್ನೇ ಸಂಪೂರ್ಣವಾಗಿ ಲಾಕ್ಡೌನ್ ಮಾಡುವುದಾಗಿ ಪ್ರಧಾನ ಮಂತ್ರಿ ಘೋಷನೆ ಮಾಡಿದ್ದಾರೆ. ಮಂಗಳವಾರ ರಾತ್ರಿ ಎರಡನೇ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, ಪರಿಸ್ಥಿತಿ ಹತೋಟಿ ಮೀರುತ್ತಿರುವುದನ್ನು ವಿವರಿಸಿದರು. ಹಾಗಾಗಿ ಜನರು ಮನೆಯಲ್ಲೇ ಇದ್ದುಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ನೀಡಿದರು. ಅಲ್ಲದೆ ಈ ಹಂತದಲ್ಲಿ ಕೋವಿಡ್ 19 ಸೋಂಕಿನ ಸರಪಳಿ ಕಡಿತಗೊಳಿಸುವುದು ಅನಿವಾರ್ಯ ಎಂದರು. ಏಪ್ರಿಲ್ 14ರ ವರೆಗೆ ಸಂಪೂರ್ಣ ಭಾರತ ಸ್ತಬ್ಧವಾಗಲಿದೆ. ಅಂದರೆ ಇನ್ನು ಮೂರು ವಾರಗಳ ಕಾಲ ಆರೋಗ್ಯ ಸೇರಿದಂತೆ ಕೆಲವು ತುರ್ತು ಸೇವೆಗಳು ಮತ್ತು ಜೀವನಾವಶ್ಯಕ ವಸ್ತುಗಳಷ್ಟೇ ಲಭ್ಯವಾಗಲಿದೆ. ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಕರೆಯನ್ನು ಕ್ರೀಡಾಪಟುಗಳು ಸ್ವಾಗತಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಟೀಮ್ ಇಂಡಿಯಾ ನಾಯಕ , ಜನರು ಸೋಷಿಯಲ್ ಡಿಸ್ಟೇನ್ಸ್ ಪಾಲಿಸಿ ಮನೆಯಲ್ಲೇ ಉಳಿಯುವಂತೆ ಮನವಿ ಮಾಡಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಮಾಜಿ ನಾಯಕ , ಸಹ ವಿಡಿಯೋ ಸಂದೇಶದ ಮೂಲಕ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಜಾಗತಿಕವಾಗಿ 422613 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, 18891 ಮಂದಿ ಸಾವಿಗೆ ಶರಣಾಗಿದ್ದಾರೆ. ಇನ್ನು ಭಾರತದಲ್ಲಿ ಕೆೋವಿಡ್ 19 ಸೋಂಕಿತರ ಸಂಖ್ಯೆ 536ಕ್ಕೆ ಏರಿಕೆಯಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಬಹುತೇಕ ಕ್ರೀಡಾಕೂಟಗಳನ್ನು ರದ್ದುಗೊಳಿಸಲಾಗಿದೆ. ಟೋಕಿಯೊ ಒಲಿಂಪಿಕ್ಸ್ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಟೂರ್ನಿಯನ್ನು ಏಪ್ರಿಲ್ 15ರ ವರೆಗೆ ಅಮಾನತಿನಲ್ಲಿಡಲಾಗಿದೆ. ಅಲ್ಲದೆ ಈ ಬಾರಿ ಆಯೋಜನೆಯಾಗುವುದು ಬಹುತೇಕ ಅನುಮಾನವೆನಿಸಿದೆ. ಆರ್ ಅಶ್ವಿನ್ ಸೌರವ್ ಘೋಷಾಲ್ ರಾಜವರ್ಧನ ರಾಥೋಡ್ ಸಾತಿಯನ್ ಜ್ಞಾನಶೇಖರನ್ ವಿವಿಎಸ್ ಲಕ್ಷ್ಮಣ್ ಆರ್ಪಿ ಸಿಂಗ್ ಹರ್ಭಜನ್ ಸಿಂಗ್ ಮೊಹಮ್ಮದ್ ಕೈಫ್ ಇರ್ಫಾನ್ ಪಠಾಣ್
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2QK7jNp