ದಿಲ್ಲಿಯಲ್ಲಿ 24 ಗಂಟೆ ದಿನಸಿ ಅಂಗಡಿ ಓಪನ್‌, ಇ-ಕಂಪನಿಗಳು ಲಾಕ್‌ಡೌನ್‌ನಿಂದ ಮುಕ್ತ!

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದಿಲ್ಲಿಯಲ್ಲಿ ಕೊರೊನಾ ವೈರಸ್‌ನಿಂದ ಕಳೆದ 24 ಗಂಟೆಯಲ್ಲಿ ಮತ್ತೊಂದು ಪ್ರಕರಣ ದೃಢಪಟ್ಟಿದ್ದು ಒಟ್ಟು ಸಂಖ್ಯೆ 36ಕ್ಕೆ ಏರಿಕೆಯಾಗಿದೆ ಎಂದು ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್‌ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿಎಂ ತಿಳಿಸಿದರು. ಲಾಕ್‌ಡೌನ್‌ ಹಿನ್ನೆಲೆ ರಾಜ್ಯದ ಜನತೆಗೆ ದಿನನಿತ್ಯದ ವಸ್ತುಗಳ ಮೇಲೆ ಸಮಸ್ಯೆಯಾಗದಿರಲು 24 ಗಂಟೆ ದಿನಸಿ ಮತ್ತು ದಿನಬಳಕೆ ವಸ್ತುಗಳು ಸಿಗುವ ಅಂಗಡಿಗಳು ತೆರೆದಿಡುವಂತೆ ಸಿಎಂ ಕೇಜ್ರಿವಾಲ್‌ ಮನವಿ ಮಾಡಿದರು. ಅಂಗಡಿಗಳ ಭೇಟಿ ನೀಡುವಾಗ ಜನಸಂದಣಿ ಏರ್ಪಡಂತೆ ಎಚ್ಚರಿಕೆ ವಹಿಸುವಂತೆಯೂ ತಾಕೀತು ಮಾಡಿದರು. ಇ-ವ್ಯಾಪಾರ ಕಂಪನಿಗಳಿಗೆ ಲಾಕ್‌ಡೌನ್‌ ನಿರ್ಬಂಧಗಳನ್ನು ತೆರವುಗೊಳಿಸಿ ಕೇಜ್ರಿವಾಲ್‌ ಆದೇಶಿಸಿದ್ದಾರೆ. ಜೊತೆಗೆ ಈ ಕುರಿತು ಸ್ಪಷ್ಟಪಡಿಸುವಂತೆ ಆಡಳಿತ ಮಂಡಳಿ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಲಾಕ್‌ಡೌನ್‌ ಇದ್ದರೂ ಜನರ ದೈನಂದಿನ ಬದುಕಿಗೆ ಯಾವುದೇ ತೊಡಕು ಉಂಟಾಗದಿರಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಈ ಕ್ರಮ ಕೈಗೊಂಡಿದ್ದಾರೆ. ರಾಷ್ಟ್ರದಲ್ಲಿ ದೃಢಪಟ್ಟವರ ಸಂಖ್ಯೆ 600ರ ಗಡಿ ದಾಟಿದೆ. ಕೋವಿಡ್‌-19 ಸೋಂಕಿನಿಂದ ಸತ್ತವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಷ್ಟ್ರಾದ್ಯಂತ 21 ದಿನಗಳ ಲಾಕ್‌ಡೌನ್‌ ಅವಧಿ 2ನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಕೆಲವು ಕಡೆಗಳಲ್ಲಿ ಜನ ರಾಷ್ಟ್ರದ ತುರ್ತು ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳದಿರುವುದು ಕಂಡು ಬಂದಿದೆ.


from India & World News in Kannada | VK Polls https://ift.tt/3dzety6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...