ಮಾರ್ಚ್‌ 31 ರ ತನಕ ಕರ್ನಾಟಕವನ್ನು ಸಂಪೂರ್ಣ ಸ್ತಬ್ಧಗೊಳಿಸಿ, ಬಿಎಸ್‌ವೈಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ರಾಜಸ್ಥಾನದ ಮಾದರಿಯಲ್ಲಿ ಕರ್ನಾಟಕವನ್ನು ಮಾರ್ಚ್‌ 31ರ ತನಕ ಸಂಪೂರ್ಣ ಸ್ತಬ್ಧಗೊಳಿಸಲು ಕಾಂಗ್ರೆಸ್ ಆಗ್ರಹಿಸಿದೆ. ಟ್ವೀಟ್‌ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಒತ್ತಾಯಿಸಿರುವ ಕಾಂಗ್ರೆಸ್, ಈ ಸಂದರ್ಭದಲ್ಲಿ ನಿರ್ವಹಣೆಗಾಗಿ ಆರ್ಥಿಕ ಯೋಜನೆಯನ್ನು ಘೋಷಣೆ ಮಾಡುವಂತೆ ಬೇಡಿಕೆ ಮುಂದಿಟ್ಟಿದೆ. ಕೊರೊನಾ ನಿಯಂತ್ರಣದ ಮಾಡುವ ನಿಟ್ಟಿನಲ್ಲಿ ರಾಜಸ್ಥಾನ ಸರ್ಕಾರ ಮಾರ್ಚ್‌ 31ರ ತನಕ ರಾಜ್ಯವನ್ನು ಸಂಪೂರ್ಣ ಸ್ತಬ್ಧಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. ಈ ಮೂಲಕ ಸೋಂಕು ಹರಡದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಮುಂಜಾಗರೂಕತಾ ಕ್ರಮವನ್ನು ಕೈಗೊಳ್ಳಲಿ ಎಂದು ಕಾಂಗ್ರೆಸ್‌ ಯಡಿಯೂರಪ್ಪನವರನ್ನು ಒತ್ತಾಯಿಸಿದೆ. ಕೋವಿಡ್‌ -19 ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಭಾನುವಾರ ಜಾರಿಯಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಘೋಷಣೆಗೆ ದೇಶಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಜನತಾ ಕರ್ಪ್ಯೂ ಯಶಸ್ವಿಯಾಗಿದ್ದು, ಜನರು ರಸ್ತೆಗಿಳಿಯದೆ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಇನ್ನು ರಾಜ್ಯದಲ್ಲಿ ಮಾರ್ಚ್ 31ರ ವರೆಗೂ ನಿರ್ಬಂಧವನ್ನು ಮುಂದುವರಿಸಲಾಗಿದ್ದು ಯಾವುದೇ ಸಭೆ ಸಮಾರಂಭಗಳಿಗೆ ಅವಕಾಶವನ್ನು ನಿರಾಕರಿಸಲಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ಪ್ರತ್ಯೇಕ ಆಸ್ಪತ್ರೆ, ಗಡಿಗಳನ್ನು ಮುಚ್ಚುವುದು ಹಾಗೂ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ, ಎರಡು ತಿಂಗಳು ಉಚಿತ ರೇಷನ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.


from India & World News in Kannada | VK Polls https://ift.tt/2xk3tne

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...