6 ತಿಂಗಳ ವೇತನ ನೀಡಿ ಮಾನವೀಯತೆ ಮೆರೆದ ಭಜರಂಗ್‌

ಹೊಸದಿಲ್ಲಿ: ಮಹಾಮಾರಿ ಇಡೀ ವಿಶ್ವವನ್ನೇ ಆವರಿಸುತ್ತಿದೆ. ಈಗಾಗಲೇ ಸಾವಿರಾರು ಮಂದಿಯನ್ನು ಈ ಮಾರಣಾಂತಿಕ ವೈರಸ್‌ ಬಲಿ ತೆಗದುಕೊಂಡಿದೆ. ಭಾರತದಲ್ಲಿ ಕೊರೊನಾ ವೈರಸ್‌ಗೆ 9 ಮಂದಿ ಬಲಿಯಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಆಯಾ ರಾಷ್ಟ್ರಗಳು ಕೋವಿಡ್‌-19 ಸೋಂಕನ್ನು ನಿಯಂತ್ರಿಸಲು ಹರ ಸಾಹಸ ಪಡುತ್ತಿವೆ. ಇದರ ನಡುವೆ ಕೊರೊನಾ ವೈರಸ್‌ ನಿಯಂತ್ರಿಸಲು ಕೈ ಜೋಡಿಸಿರುವ ಕ್ರೀಡಾಪಟುಗಳು, ಸಾಮಾಜಿಕ ಜಾಲತಾಣದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಜತೆಗೆ, ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ಮಾಡಲು ಮುಂದಾಗುತ್ತಿದ್ದಾರೆ. ಈ ಸಾಲಿನಲ್ಲಿ ಇದೀಗ ಭಾರತ ಸ್ಟಾರ್‌ ಕುಸ್ತಿಪಟು ಕೊರೊನಾ ವೈರಸ್‌ ವಿರುದ್ಧದ ಹೋರಾಟಕ್ಕೆ ತಮ್ಮ 6 ತಿಂಗಳ ವೇತನನ್ನು ದೇಣಿಗೆಯಾಗಿ ನೀಡಿದ್ದಾರೆ. ಭಜರಂಗ್ ಪೂನಿಯಾ ರೈಲ್ವೆ ಇಲಾಖೆಯಲ್ಲಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. "ಹರಿಯಾಣ ಮುಖ್ಯಮಂತ್ರಿ ಎಂ.ಎಲ್ ಖಟ್ಟಾರ್ ಅವರು ಸ್ಥಾಪಿಸಿದ ಕೋವಿಡ್ -19 ರೋಗಿಗಳಿಗೆ ಪರಿಹಾರ ನಿಧಿಗೆ ನನ್ನ ಆರು ತಿಂಗಳ ವೇತನವನ್ನು ದೇಣಿಗೆ ನೀಡಿದ್ದೇನೆ,'' ಎಂದು ಭಜರಂಗ್ ಹೇಳಿದ್ದಾರೆ. ಜತೆಗೆ, ಜನರು ಕೂಡ ಪರಿಹಾರ ನಿಧಿಗೆ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನೆರವು ನೀಡಿ,'' ಎಂದು ಮನವಿ ಮಾಡಿಕೊಂಡಿದ್ದಾರೆ. ಭಜರಂಗ್‌ ಪೂನಿಯಾ ಅವರ ಪ್ರಯತ್ನ ಶ್ಲಾಘನೀಯ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು 2019 ರ ವಿಶ್ವ ಚಾಂಪಿಯನ್‌ಶಿಪ್ ಕಂಚಿನ ಪದಕ ವಿಜೇತರನ್ನು ಕೊಂಡಾಡಿದ್ದಾರೆ. ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಾರ್ವಜನಿಕ ಸೇವೆಗಳನ್ನು ಒದಗಿಸಲು ಹರಿಯಾಣ ಸರ್ಕಾರ ಸೋಮವಾರ ಸ್ವಯಂಪ್ರೇರಿತ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಕೋವಿಡ್‌-19 ಅನ್ನು ನಿರ್ಣಾಮ ಮಾಡಲು ''ಕೋವಿಡ್ - ಸಂಘರ್ಷ ಸೆನಾನಿ '' ಎಂಬ ಕಾರ್ಯಕ್ರಮವನ್ನು ಸೋಮವಾರ ಪ್ರಾರಂಭಿಸಲಾಯಿತು. ಇದರಿಂದ ಆಸ್ಪತ್ರೆಗಳಲ್ಲಿ-ಅರೆವೈದ್ಯರು ಮತ್ತು ವೈದ್ಯರು ಹಾಗೂ ಜಿಲ್ಲಾಡಳಿತದೊಂದಿಗೆ ಜನರು ಕೂಡ ಸ್ವಯಂಪ್ರೇರಣೆಯಿಂದ ತಮ್ಮ ಸೇವೆಯನ್ನು ನೀಡಲು ಸಾಧ್ಯವಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಭಾರತ ಕ್ರಿಕೆಟ್‌ ತಂಡದ ಮಾಜಿ ಆರಂಭಿಕ ಮತ್ತು ಬಿಜೆಪಿ ಹಾಲಿ ಸಂಸದ ಗೌತಮ್ ಗಂಭೀರ್ ಕೂಡ ಕೊರೊನಾ ವೈರಸ್‌ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಅವರು ತಮ್ಮ ಸಂಸತ್ತಿನ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ (ಎಂಪಿಎಎಲ್‍ಡಿಎಸ್) ನಿಧಿಯಿಂದ 50 ಲಕ್ಷ ರೂ. ಗಳನ್ನು ಕೊರೊನಾ ವೈರಸ್ ರೋಗಿಗಳ ಚಿಕಿತ್ಸೆಗೆ ಅಗತ್ಯ ಸಾಧನಗಳಿಗಾಗಿ ದೆಹಲಿ ಸರ್ಕಾರಿ ಆಸ್ಪತ್ರೆಗಳಿಗೆ ನೀಡಿದ್ದಾರೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3agNZz1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...