ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ 21 ದಿನಗಳ ರಾಷ್ಟ್ರಾದ್ಯಂತ ಲಾಕ್ಡೌನ್ ಕ್ರಮಕ್ಕೆ ಬೆಂಬಲ ಸೂಚಿಸಿದ್ದಾರೆ. ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ತೆಗೆದುಕೊಂಡಿರುವ ಕ್ರಮ ಸ್ವಾಗತಾರ್ಹ ಎಂದಿದ್ದಾರೆ. ''ಕೊರೊನಾ ಸೋಂಕು ತಡೆ ನಿಟ್ಟಿನಲ್ಲಿ ಕೇಂದ್ರ ಸರಕಾರ ತೆಗೆದುಕೊಂಡಿರುವ ಪ್ರತಿಯೊಂದು ಕ್ರಮವನ್ನು ಕಾಂಗ್ರೆಸ್ ಬೆಂಬಲಿಸುತ್ತದೆ. ಮಹಾಮಾರಿಯನ್ನು ಹೊಡೆದೋಡಿಸಲು ಸರಕಾರದ ಜೊತೆ ಕಾರ್ಯ ನಿರ್ವಹಿಸುತ್ತದೆ'' ಎಂದು ನಾಲ್ಕು ಪುಟಗಳ ಪತ್ರದಲ್ಲಿ ವಿವರಿಸಿದ್ದಾರೆ. ''ರಾಷ್ಟ್ರಕ್ಕಾಗಿ ಮತ್ತು ಮಾನವೀಯತೆಗಾಗಿ ಪ್ರತಿಯೊಬ್ಬರು ಕೇಂದ್ರ ಸರಕಾರ ಸೂಚಿಸಿರುವ ಕ್ರಮಗಳನ್ನು ಪಾಲಿಸಬೇಕು. ಇದೊಂದು ಭಾರತದ ಮುಂದಿರುವ ದೊಡ್ಡ ಸವಾಲಾಗಿದೆ. ಪ್ರತಿಯೊಬ್ಬರು ಕೈ ಜೊಡಿಸಿದರೆ ಮಹಾಮಾರಿಯನ್ನು ತೊಲಗಿಸಬಹುದು'' ಎಂದು ಪತ್ರದ ಮುಖೇನ ಸೋನಿಯಾ ಗಾಂಧಿ ಅಭಿಪ್ರಾಯ ತಿಳಿಸಿದ್ದಾರೆ. ''ಮುಂದಿನ ಆರು ತಿಂಗಳ ಕಾಲ ಇಎಂಐ ಅನ್ನು ಮುಂದೂಡಬೇಕು. ಈ ಅವಧಿಯಲ್ಲಿ ಬ್ಯಾಂಕ್ಗಳು ಜನಸಾಮಾನ್ಯರ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು'' ಎಂದು ಸೋನಿಯಾ ಗಾಂಧಿ ಆಗ್ರಹಿಸಿದ್ದಾರೆ.
from India & World News in Kannada | VK Polls https://ift.tt/2QO7x6h