ಸ್ವದೇಶಕ್ಕೆ ಮರಳಿದ 90 ಸಾವಿರ ಅನಿವಾಸಿ ಭಾರತೀಯರು: ಪಂಜಾಬ್‌ನಲ್ಲಿ ಹೆಚ್ಚಿದ ಕೊರೊನಾ ಆತಂಕ!

ಲುಧಿಯಾನ: ವಿವಿಧ ದೇಶಗಳಲ್ಲಿ ನೆಲೆಸಿದ್ದ 90 ಸಾವಿರಕ್ಕೂ ಅಧಿಕ ಮರಳಿ ತಮ್ಮ ತಾಯ್ನಾಡು ಸೇರಿದ್ದು, ಇದೀಗ ಪಂಜಾಬ್‌ನಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುವ ಭೀತಿ ಎದುರಾಗಿದೆ. ಈ ಕುರಿತು ಮಾತನಾಡಿರುವ ಪಂಜಾಬ್ ಸಿಎಂ ಕ್ಯಾ. ಅಮರೀಂದರ್ ಸಿಂಗ್, ವಿವಿಧ ದೇಶಗಳಿಂದ 90 ಸಾವಿರಕ್ಕೂ ಅಧಿಕ ಅನಿವಾಸಿ ಭಾರತೀಯರು ರಾಜ್ಯಕ್ಕೆ ಮರಳಿರುವುದರಿಂದ ಕೊರೊನಾ ಪಸರಿಸುವಿಕೆ ಹೆಚ್ಚಾಗುವ ಆತಂಕವಿದೆ ಎಂದು ಹೇಳಿದ್ದಾರೆ. ಇಷ್ಟೊಂದು ಅಗಾಧ ಪ್ರಮಾಣದಲ್ಲಿ ಆನಿವಾಸಿ ಭಾರತೀಯರು ರಾಜ್ಯಕ್ಕೆ ಮರಳಿದ್ದು, ಇದರಿಂದ ಅಕ್ಕ-ಪಕ್ಕದ ರಾಜ್ಯಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕ್ಯಾ.ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ. ಕೊರೊನಾ ಪೀಡಿತ ದೇಶಗಳಿಂದ ಸ್ವದೇಶಕ್ಕೆ ಮರಳಿರುವ ಅನಿವಾಸಿ ಭಾರತೀಯರಲ್ಲಿ ವೈರಾಣು ಕಾಣಿಸಿಕೊಂಡರೆ ಪಂಜಾಬ್‌ನಲ್ಲಿ ಭಾರೀ ಪ್ರಮಾಣದಲ್ಲಿ ಕೊರೊನಾ ಪ್ರಕರಣ ಏರಿಕೆ ಕಾಣುವ ಸಂಭವವಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಂಜಾಬ್‌ಗೆ 150 ಕೋಟಿ ರೂ. ಪ್ಯಾಕೇಜ್ ನೀಡಬೇಕೆಂದು ಮನವಿ ಮಾಡಿರುವ ಕ್ಯಾ.ಸಿಂಗ್, ವೈದ್ಯಕೀಯ ಸಲಕರಣೆಗಳ ಖರೀದಿಗೆ ನೆರವು ನೀಡಬೇಕೆಂದು ಮನವಿ ಮಾಡಿದ್ದಾರೆ. ಈಗಾಗಲೇ ಪಂಜಾಬ್ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿಧು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರಿಗೆ ಪತ್ರ ಬರೆದಿದ್ದು, ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಪಂಜಾಬ್‌ನಲ್ಲಿ ಇದುವರೆಗೂ ಒಟ್ಟು 23 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಮಾರಕ ವೈರಾಣುವಿಗೆ ಓರ್ವ ಅಸುನೀಗಿದ್ದಾನೆ. ಸದ್ಯ ಕೇಂದ್ರ ಸರ್ಕಾರದ ಆದೇಶದ ಅನ್ವಯ ಇಡೀ ಪಂಜಾಬ್ ಲಾಕ್‌ಡೌನ್ ಸ್ಥಿತಿಯಲ್ಲಿದೆ.


from India & World News in Kannada | VK Polls https://ift.tt/3bjUr8G

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...