ಎಂಎಸ್ ಧೋನಿ ನೈಜ ನಾಯಕ; ಶ್ರೇಯಸ್ ಅಯ್ಯರ್ ಮನದಾಳದ ಮಾತು

ಹೊಸದಿಲ್ಲಿ: ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಡೀ ದೇಶವನ್ನೇ ಏಪ್ರಿಲ್ 14ರ ವರೆಗೆ ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗಿದೆ. ಈ ಅವಧಿಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜನರಲ್ಲಿ ಮನೆಯಲ್ಲೇ ಉಳಿದುಕೊಳ್ಳುವಂತೆ ತಿಳಿಸಲಾಗಿದೆ. ಅಲ್ಲದೆ ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಕೋವಿಡ್ 19 ವೈರಸ್ ಸೋಂಕು ಪ್ರಕರಣದ ಭೀತಿಯ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ಕ್ರೀಡಾ ಚಟುವಟಿಕೆಗಳನ್ನು ನಿಲುಗಡೆಗೊಳಿಸಲಾಗಿದೆ. ಇದರಿಂದ ಕ್ರಿಕೆಟಿಗರೂ ಮನೆಯಲ್ಲೇ ಕಾಲ ಕಳೆಯುವಂತಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ಮನೆಯಲ್ಲಿ ಇದ್ದುಕೊಂಡು ಸೋದರಿ ಜೊತೆಗೆ ಮ್ಯಾಜಿಕ್ ಟ್ರಿಕ್ಸ್ ಪ್ರದರ್ಶಿಸಿರುವ , ಜಾದೂ ಮೆರೆದಿದ್ದರು. ಬಳಿಕ ಮನೆಯಲ್ಲಿ ಸಾಕು ನಾಯಿಯೊಂದಿಗೂ ಆಟವಾಡುವ ವಿಡಿಯೋವನ್ನು ಹಂಚಿದ್ದರು. ಇದೀಗ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ #AskShreyas ಹ್ಯಾಶ್‌ಟ್ಯಾಗ್ ಮೂಲಕ ತಮ್ಮ ಅಭಿಮಾನಿಗಳ ಪ್ರಶ್ನೆಗೆ ಉತ್ತರವನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಅಭಿಮಾನಿಯೊಬ್ಬರು ಮಾಜಿ ನಾಯಕ ಹಾಗೂ ಹಿರಿಯ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಬಗ್ಗೆ ಅಭಿಪ್ರಾಯವನ್ನು ಕೇಳಿದ್ದರು. ಇದಕ್ಕೆ ಉತ್ತರವಾಗಿ ಶ್ರೇಯಸ್ 'ಅಯ್ಯರ್, ಕೂಲ್, ಶಾಂತ, ಸ್ಥಿರತೆ ಮತ್ತು ನೈಜವಾದ ಕಪ್ತಾನ' ಎಂಬ ಉತ್ತರ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. 2019ನೇ ಸಾಲಿನಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಕೊನೆಯದಾಗಿ ಆಡಿರುವ ಮಹೇಂದ್ರ ಸಿಂಗ್ ಧೋನಿ ಅಲ್ಲಿಂದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವುಳಿದಿದ್ದರು. ಈ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭರ್ಜರಿ ಪುನರಾಗಮನವನ್ನು ಎದುರು ನೋಡುತ್ತಿರುವ ಮಹಿ ಪೂರ್ವ ಸಿದ್ಧತೆಯನ್ನು ಆರಂಭಿಸಿದ್ದರು. ಇದರಿಂದಾಗಿ ಟಿ20 ವಿಶ್ವಕಪ್ ತಂಡಕ್ಕೆ ಮರಳುವ ಸೂಚನೆ ನೀಡಿದ್ದರು. ಈ ಮಧ್ಯೆ ಕೊರೊನಾ ವೈರಸ್ ಭೀತಿಯಿಂದಾಗಿ ಐಪಿಎಲ್ ಏಪ್ರಿಲ್ 15ರ ವರೆಗೆ ಮುಂದೂಡಲಾಗಿದೆ. ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್ ಅಭ್ಯಾಸ ಅವಧಿಯನ್ನು ನಿಲುಗಡೆಗೊಳಿಸಲಾಗಿದೆ. ಹಾಗೊಂದು ವೇಳೆ ಐಪಿಎಲ್ ರದ್ದಾದರೆ ಧೋನಿ ಭವಿಷ್ಯ ಏನಾಗಲಿದೆ ಎಂಬುದು ಗೊಂದಲಕ್ಕೆ ಕಾರಣವಾಗಿದೆ. ಏತನ್ಮಧ್ಯೆ ಅಭಿಮಾನಿಯೊಬ್ಬರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಶ್ರೇಯಸ್ ಅಯ್ಯರ್, ಸಂಗೀತದ ಹೊರತಾಗಿ ಜೀವಿಸಲು ಅಸಾಧ್ಯ ಎಂದು ಹೇಳಿದ್ದಾರೆ. ಹಾಗೆಯೇ ಈ ಕಠಿಣ ಸಮಯದಲ್ಲಿ ಜನರೊಂದಿಗೆ ಏನಾದರೂ ಸಂದೇಶ ಹಂಚಿಕೊಳ್ಳಲು ಬಯಸುತ್ತೀರಾ ಎಂಬುದಾಗಿ ಬಿಸಿಸಿಐ ಕೇಳಿದಾಗ, 'ಎಲ್ಲರೂ ಮನೆಯಲ್ಲೇ ಉಳಿದುಕೊಳ್ಳುವಂತೆ ಮನವಿ ಮಾಡಿದರು. ಈ ಸಂಬಂಧ ವಿಡಿಯೋ ಹಂಚಿರುವ ಶ್ರೇಯಸ್, ಕೊರೊನಾ ವೈರಸ್ ವಿರುದ್ಧ ನಾವೆಲ್ಲರೂ ಹೋರಾಡುತ್ತಿದ್ದೇವೆ. ನಮ್ಮ ಸರಕಾರ, ವೈದ್ಯಕೀಯ ಇಲಾಖೆ, ಪೊಲೀಸ್ ಹಾಗೂ ಆಡಳಿತ ವಿಭಾಗವು ಹಗಳಿರುಳು ದುಡಿಯುತ್ತಿದೆ. ನಾವು ಕೂಡಾ ಮನೆಯಲ್ಲೇ ಇರುವ ಮೂಲಕ ನಮ್ಮ ಕೊಡುಗೆಯ್ನನು ಸಲ್ಲಿಸಬೇಕಿದೆ. ಅನಿವಾರ್ಯ ಪರಿಸ್ಥಿತಿಯ ಹೊರತಾಗಿ ಮನೆಯಿಂದ ಹೊರಗೆ ಹೋಗಬೇಡಿ. ಆಗಾಗ ಕೈ ತೊಳೆಯುತ್ತಿರಿ. ಭಯ ಬೇಡ, ನಾವೆಲ್ಲರೂ ಒಗ್ಗಟ್ಟಾಗಿ ಈ ಪರಿಸ್ಥಿತಿಯಿಂದ ಹಾದು ಹೋಗಲಿದ್ದೇವೆ' ಎಂಬ ಸ್ಫೂರ್ತಿದಾಯಕ ಮಾತುಗಳನ್ನು ಆಡಿದರು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2wClNYX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...