ನವದೆಹಲಿ: ಕೊರೊನಾ ಪೀಡಿತ ಸೌದಿ ಅರೇಬಿಯಾಗೆ ಅಧಿಕೃತ ಭೇಟಿಗೆ ತೆರಳಿದ್ದ ಸಂಸದ , ಇದೀಗ ತಮ್ಮ ಮನೆಯಲ್ಲಿ ಸ್ವಯಂ ವಿಧಿಸಿಕೊಂಡಿದ್ದಾರೆ. ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬಂದಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ಸುರೇಶ್ ಪ್ರಭು 14 ದಿನಗಳ ಕಾಲ ಸ್ವಯಂ ದಿಗ್ಬಂಧನ ವಿಧಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿರುವ ಸುರೇಶ್ ಪ್ರಭು, ಕೊರೊನಾ ಪರೀಕ್ಷೆ ಹಿನ್ನೆಲೆಯಲ್ಲಿ 14 ದಿನಗಳ ಸವಯಂ ದಿಗ್ಬಂಧನ ವಿಧಿಸಿಕೊಂಡಿದ್ದು, ರಾಜ್ಯಸಭೆ ಕಲಾಪಗಳಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬಂದಿದ್ದರೂ, ಸಹೋದ್ಯೋಗಿಗಳ ಆರೋಗ್ಯ ಗಮನದಲ್ಲಿರಿಸಿಕೊಂಡು ರಾಜ್ಯಸಭೆ ಕಲಾಪಕ್ಕೆ ಹಾಜರಾಗದಿರುವ ನಿರ್ಣಯ ಕೈಗೊಂಡಿರುವುದಾಗಿ ಸುರೇಶ್ ಪ್ರಭು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕೊರೊನಾ ಪೀಡಿತ ವೈದ್ಯರೊಬ್ಬರನ್ನು ಭೇಟಿ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ.ಮರಳಿಧರನ್ ಕೂಡ ತಮ್ಮ ಅಧಿಕೃತ ನಿವಾಸದಲ್ಲಿ ಸ್ವಯಂ ದಿಗ್ಬಂಧನ ವಿಧಿಸಿಕೊಂಡಿರುವುದನ್ನು ಇಲ್ಲಿ ಸ್ಮರಿಸಬಹುದು. ಭಾರತದಲ್ಲಿ ಇದುವರೆಗೂ ಒಟ್ಟು 147 ಕೊರೊನಾ ಪ್ರಕರಣಗಳು ಒತ್ತೆಯಾಗಿದ್ದು, ಮಾರಕ ಕೊರೊನಾ ವೈರಾಣುವಿಗೆ ಮೂವರು ಬಲಿಯಾಗಿದ್ದಾರೆ.
from India & World News in Kannada | VK Polls https://ift.tt/2TWL9K2