ಬೆಂಗಳೂರು: ಅಗತ್ಯ ಸೇವೆ ನೀಡುವವರಿಗಾಗಿ ಕೆಲವು ನಿರ್ದಿಷ್ಟ ಮಾರ್ಗಗಳಲ್ಲಿ ಗುರುವಾರದಿಂದ ಬಿ.ಎಂ.ಟಿ.ಸಿ. ಬಸ್ಸುಗಳು ಕಾರ್ಯನಿರ್ವಹಿಸಲಿವೆ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷಣ ಸವದಿ ಸ್ಪಷ್ಟಪಡಿಸಿದ್ದಾರೆ. ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿದ್ದು ಅಗತ್ಯ ಸೇವೆವನ್ನು ನೀಡುವ ಜನರಿಗೆ ಅನುಕೂಲವಾಗಲಿ ಎಂದು ಬಿ.ಎಂ.ಟಿ.ಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸೇವೆ ಇರೋದು ಜನಸಾಮಾನ್ಯರಿಗಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಕೇವಲ ಅವಶ್ಯಕ ಸೇವೆಗಳ ನೌಕರರು, ವೈದ್ಯರು, ದಾದಿಯರು, ಆಸ್ಪತ್ರೆ ನೌಕರರು, ಸೆಕ್ಯೂರಿಟಿ ಗಾರ್ಡ್ಗಳು, ಬ್ಯಾಂಕ್ ಉದ್ಯೋಗಿಗಳು, ಹಾಗೂ ಮಾಧ್ಯಮದವರಿಗೆ ಮಾತ್ರ ಬಿಎಂಟಿಸಿಯಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ಬಸ್ಸಿನಲ್ಲಿ ಗರಿಷ್ಠ 20 ಜನ ಮಾತ್ರ ಪ್ರಯಾಣಿಸಬಹುದಾಗಿರುತ್ತದೆ. ಬಸ್ಸನ್ನು ಚಲಾಯಿಸುವ ಎಲ್ಲ ಚಾಲಕ ನಿರ್ವಹಕರುಗಳಿಗೆ ಮುಂಜಾಗರೂಕತಾ ಕ್ರಮಗಳ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ. ಪ್ರತಿಯೊಂದು ವಾಹನದಲ್ಲಿ 20 ಕ್ಕಿಂತ ಮೀರದಂತೆ ಪ್ರಯಾಣಿಕರು, ಪೊಲೀಸ್ ಸಿಬ್ಬಂದಿ, ಆಸ್ಪತ್ರೆ ಸಿಬ್ಬಂದಿ, ಮೆಡಿಕಲ್ ಶಾಪ್, ಕಾರ್ಪೊರೇಷನ್, ಮೆಟ್ರೋ ಸಿಬ್ಬಂದಿ, ಖಾಸಗಿ ಸೆಕ್ಯೂರಿಟಿ ಗಾರ್ಡ್,ಬ್ಯಾಂಕ್ ಸಿಬ್ಬಂದಿ, ರಕ್ತ ದಾನಿಗಳು, ಅಲ್ಲದೆ ಆಸ್ಪತ್ರೆಗೆ ಭೇಟಿ ನೀಡುವ ನಾಗರೀಕರು, ರೋಗಿಗಳನ್ನು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಇವರಲ್ಲದೆ ಪೊಲೀಸ್ ಇಲಾಖೆಯಿಂದ ಪಾಸ್ ಪಡೆದಿರುವ ಅಂಗಡಿ ಕಾರ್ಮಿಕರು, ಡೆಲಿವರಿ ಹುಡುಗರು, ಪೆಟ್ರೋಲ್ ಬಂಕ್ ಸಿಬ್ಬಂದಿ, ಹೋಟೆಲ್ ಸಿಬ್ಬಂದಿಯನ್ನು ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದೆಲ್ಲೆಡೆ ಕೊರೊನ ಮಹಾಮಾರಿಯನ್ನು ತಡೆಯ್ಯುವ ಪ್ರಯುಕ್ತ ಲಾಕ್ ಡೌನ್ ಘೋಷಿಸಿದೆ.ಇದರ ನಡುವೆ ತುರ್ತು ಸೇವೆಗಳ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಬಿಎಂಟಿಸಿ ಯ ಬಸ್ಸುಗಳಿಗೆ ರಸ್ತೆಗಿಳಿಯಲು ಅವಕಾಶ ಕಲ್ಪಿಸಲಾಗಿದೆ.
from India & World News in Kannada | VK Polls https://ift.tt/39gkEnj