ನವದೆಹಲಿ: ರಾಷ್ಟ್ರಪತಿಗಳಿಂದ ರಾಜ್ಯಸಭೆಗೆ ನಾಮಾಂಕಿತರಾಗಿರುವ ನಿವೃತ್ತ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ , ಈ ಕುರಿತು ಪ್ರಮಾಣವಚನ ಸ್ವೀಕರಿಸಿದ ಬಳಿಕವಷ್ಟೇ ಮಾತನಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಗೆ ನಾಮಾಂಕಿತರಾಗಿರುವ ಮೊದಲ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ರಂಜನ್ ಗೊಗೊಯಿ, ರಾಷ್ಟ್ರಪತಿಗಳ ಆದೇಶವನ್ನು ಒಪ್ಪಿಕೊಂಡಿದ್ದೇಕೆ ಎಂಬುದರ ಕುರಿತು ಪ್ರಮಾಣವಚನ ಸ್ವೀಕರಿಸಿದ ಬಳಿಕವಷ್ಟೇ ಮಾತನಾಡುವುದಾಗಿ ಹೇಳಿದ್ದಾರೆ. ನಾನು ಇಂದು ಸಂಜೆ ನವದೆಹಲಿಗೆ ಹೊರಡಲಿದ್ದೇನೆ, ಮೊದಲು ಪ್ರಮಾಣವಚನ ಸ್ವೀಕರಿಸಲು ಬಿಡಿ, ಆ ಬಳಿಕವಷ್ಟೇ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತ ನೀಡುವುದಾಗಿ ಗೊಗೊಯಿ ಪತ್ರಕರ್ತರನ್ನು ಉದ್ದೇಶಿಸಿ ಹೇಳಿದರು. ಇತ್ತ ಗೊಗೊಯಿ ಅವರನ್ನು ರಾಜ್ಯಸಭೆಗೆ ನಾಮಾಂಕಿತಗೊಳಿಸಿದ ರಾಷ್ಟ್ರಪತಿಗಳ ನಿರ್ಧಾರವನ್ನು ವಿಪಕ್ಷಗಳು ಪ್ರಶ್ನಿಸಿವೆ. ನಿವೃತ್ತ ನ್ಯಾಯಮೂರ್ತಿ ಅವರನ್ನು ರಾಜ್ಯಸಭೆಗೆ ನೇಮಿಸುವ ಮೂಲಕ ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರಿದಂತಾಗುತ್ತದೆ ಎಂದು ಹಲವರು ಕಿಡಿಕಾರಿದ್ದಾರೆ. ಅಲ್ಲದೇ ಭವಿಷ್ಯದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಇದರಿಂದ ತಪ್ಪು ಸಂದೇಶವನ್ನು ರವಾನಿಸದಂತಾಗುತ್ತದೆ ಎಂದು ವಿಪಕ್ಷಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ.
from India & World News in Kannada | VK Polls https://ift.tt/2WjOuV6