ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಮೆನ್ನೆಚ್ಚರಿಕೆಗಳಿಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆರೋಗ್ಯ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್ ಮೂಲಕ ಇಬ್ಬರು ಸಚಿವರು ಹಾಗೂ ಅವರ ಇಲಾಖೆಗಳ ಸಿಬ್ಬಂದಿ ವರ್ಗದ ಕೆಲಸ ಕಾರ್ಯಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಸಚಿವರು ವಹಿಸುತ್ತಿರುವ ಶ್ರಮಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. “ಸೋಂಕು ನಿಯಂತ್ರಣಕ್ಕೆ ಸರ್ಕಾರ ಕೈಗೊಂಡಿರುವ ಎಲ್ಲ ಕ್ರಮಗಳ ಸಾಕಾರಕ್ಕೆ ಅಹರ್ನಿಶಿ ಶ್ರಮಿಸುತ್ತಿರುವ ಆರೋಗ್ಯ ಸಚಿವ ಶ್ರೀರಾಮಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರ ತಂಡಗಳಿಗೆ ಮತ್ತು ವೈದ್ಯಕೀಯ ಕ್ಷೇತ್ರದ ಎಲ್ಲ ವೈದ್ಯರು ಹಾಗೂ ಸಿಬ್ಬಂದಿಗೆ ಅಭಿನಂದನೆಗಳು” ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಕೊರೊನಾ ಸೋಂಕು ಹರಡದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಹಾಗೂ ವೈರಸ್ ತಡೆಗಟ್ಟುವ ಕುರಿತು ಇತರರಲ್ಲಿ ಅರಿವು ಮೂಡಿಸುತ್ತಿರುವ ಸಮಸ್ತ ಸಾರ್ವಜನಿಕರಿಗೂ ಮುಖ್ಯಮಂತ್ರಿ ಬಿಎಸ್ವೈ ಧನ್ಯವಾದ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಹರಡುತ್ತಿದ್ದು ಮಾರ್ಚ್ 19 ರ ತನಕ 15 ಪ್ರಕರಣಗಳು ಅಧಿಕೃತಗೊಂಡಿವೆ. ಹಲವರಲ್ಲಿ ಕೋವಿಡ್ -19 ಸೋಂಕು ಶಂಕೆ ವ್ಯಕ್ತವಾಗಿದ್ದು, ಅವರನ್ನು ಆಸ್ಪತ್ರೆ ಹಾಗೂ ಮನೆಗಳನ್ನು ನಿಗಾದಲ್ಲಿ ಇಡಲಾಗಿದೆ. ಮುಂಜಾಗರೂಕತಾ ಕ್ರಮವಾಗಿ ಮಾರ್ಚ್ 31ರ ತನಕ ರಾಜ್ಯದಲ್ಲಿ ನಿರ್ಬಂಧವನ್ನು ಮುಂದುವರಿಸಲಾಗಿದ್ದು, ಯಾವುದೇ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವನ್ನು ನಿರಾಕರಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದ್ದು ವಿದೇಶದಿಂದ ಬೆಂಗಳೂರು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವರನ್ನು ನಿಗಾದಲ್ಲಿ ಇಡಲಾಗಿದೆ.
from India & World News in Kannada | VK Polls https://ift.tt/2U2Pknw