ಯತ್ನಾಳ್ ವಿವಾದ - ಸದನದಲ್ಲಿ ಧರಣಿ ವಾಪಸ್‌ ಪಡೆದುಕೊಂಡ ಕಾಂಗ್ರೆಸ್

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್‌ ದೊರೆಸ್ವಾಮಿಯ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸದನದಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್‌ ಪಡೆದುಕೊಂಡಿದೆ. ಗುರುವಾರ ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಧರಣಿಯನ್ನು ವಾಪಸ್‌ ಪಡೆಯುವ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸದನದಲ್ಲಿ ಪ್ರಕಟಿಸಿದರು. ಬುಧವಾರ ರಾಜ್ಯಪಾಲರ ಭೇಟಿಯಾಗಿ ಯತ್ನಾಳ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶ ಮಾಡುವಂತೆ ಆಗ್ರಹಿಸಿದ ಕಾಂಗ್ರೆಸ್, ಬಳಿಕ ಪ್ರತಿಭಟನೆಯನ್ನು ಹಿಂಪಡೆದುಕೊಂಡು ಕದನದ ಕಲಾಪಗಳಲ್ಲಿ ಭಾಗವಹಿಸಲು ನಿರ್ಧರಿಸಿದೆ. ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸ್ಪೀಕರ್‌ಗೆ ಸೂಚನೆ ನೀಡುವಂತೆ ರಾಜ್ಯಪಾಲರನ್ನು ಕಾಂಗ್ರೆಸ್ ನಿಯೋಗ ಭೇಟಿಯಾದ ವಿಚಾರವದನ್ನು ಬುಧವಾರ ಸದನದ ಗಮನಕ್ಕೆ ತಂದ ಸಿದ್ದರಾಮಯ್ಯ, ಗುರುವಾರ ರಾಜ್ಯ ಬಜೆಟ್‌ ಮಂಡನೆ ಹಾಗೂ ಪ್ರಮುಖ ವಿಧೇಯಕಗಳು ಅಂಗೀಕಾರಗೊಳ್ಳಬೇಕಾಗಿರುವುದರಿಂದ ಸಾರ್ವಜನಿಕ ಹಿತಾಸಕ್ತಿಯಿಂದಾಗಿ ಪ್ರತಿಭಟನೆಯನ್ನು ವಾಪಸ್‌ ಪಡೆದುಕೊಳ್ಳುವುದಾಗಿ ಘೋಷಣೆ ಮಾಡಿದರು. ಸದನದಲ್ಲಿ ನಮ್ಮ ಜಾವಾಬ್ದಾರಿ ನಿರ್ವಹಣೆ ಮಾಡದೇ ಇದ್ದರೆ ಕರ್ತವ್ಯ ಲೋಪ ಎಸಗಿದ್ದಂತೆ ಆಗುತ್ತಿದೆ ಎಂದ ಅವರು, ಧರಣಿ ವಾಪಸ್‌ ಪಡೆಯುವ ತೀರ್ಮಾನವನ್ನು ಕೈಗೊಂಡರು. ಪ್ರತಿಪಕ್ಷಗಳ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿಪ್ರಾಯ ವೆತ್ಯಾಸಗಳು ಇರುವುದು ಸಹಜ, ಆದರೆ ರಾಜ್ಯದ ಜನರ ಹಿತದೃಷ್ಟಿಯಿಂದ ಸದನ ನಡೆಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಧರಣಿ ಹಿಂಪಡೆದ ವಿರೋಧ ಪಕ್ಷದ ನಿರ್ಧಾರ ಸ್ವಾಗತಾರ್ಹ ಎಂದರು.


from India & World News in Kannada | VK Polls https://ift.tt/2TD4cHM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...