ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೀಗೊಂದು ಐಡಿಯಾ! ವೈರಲ್ ಆಯ್ತು ಫೋಟೋ

ಬೆಂಗಳೂರು: ಕೊರೊನಾ ನಿಯಂತ್ರಣ ಮಾಡಲು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಬಹುಮುಖ್ಯ. ಸದ್ಯ ಭಾರತದ ಮುಂದೆ ಇರುವುದು ಇದೊಂದೇ ದಾರಿ. ಈ ಕಾರಣಕ್ಕಾಗಿ 21 ದಿನಗಳ ಕಾಲ ದೇಶದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಆದರೂ ಕೆಲವೊಂದು ಅಗತ್ಯ ಸಾಮಾಗ್ರಿಗಳನ್ನು ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಸಂದರ್ಭದಲ್ಲಿ ಜನರು ಕೆಲವೊಂದು ಮಹತ್ವದ ವಿಚಾರಗಳನ್ನು ಗಮನದಲ್ಲಿ ಇಟ್ಟುಕೊಳ್ಳುವುದು ಬಹುಮುಖ್ಯ. ದಿನಸಿ ಅಂಗಡಿ, ತರಕಾರಿ ಅಂಗಡಿಗಳಲ್ಲಿ ಖರೀದಿ ಮಾಡುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಿದೆ. ಅದಕ್ಕಾಗಿ ಬೆಂಗಳೂರು ಪೊಲೀಸರು ಪರಿಚಯಿಸಿದ ಪ್ಲಾನ್‌ ಒಂದು ಮೆಚ್ಚುಗೆ ಪಾತ್ರವಾಗುತ್ತಿದೆ. ಕೊರೊನಾ ವೈರಸ್‌ ನಿಂದ ಬಚಾವಾಗಲು ಜನರು ಕನಿಷ್ಠ ಆರು ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಅದರಂತೆ ಬೆಂಗಳೂರು ನಗರ ಪೊಲೀಸ್ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಸಪೇಟ್‌ ಅವರು ಒಂದು ಪ್ಲಾನ್ ಮಾಡಿದ್ದಾರೆ. ಆರು ಅಡಿ ಅಂತರ ಇರುವಂತೆ ಸರ್ಕಲ್ ಮಾದರಿಯಲ್ಲಿ ಗುರುರುಗಳನ್ನು ಹಾಕಿ ಜನರು ದಿನಸಿ ಅಂಗಡಿಗಳಿಗೆ, ಎಟಿಎಂ ಸೆಂಟರ್‌ಗಳಿಗೆ ಹಾಗೂ ತರಕಾರಿ ಖರೀದಿ ಮಾಡುವ ಸಂದರ್ಭದಲ್ಲಿ ಈ ಅಂತರವನ್ನು ಪಾಲಿಸಬೇಕು. ಈ ಮೂಲಕ ಕೊರೊನಾ ಹರಡದಂತೆ ತಡೆಯಬಹುದಾಗಿದೆ. ಕೇವಲ ಬೆಂಗಳೂರು ಮಾತ್ರವಲ್ಲ, ಬೇರೆ ರಾಜ್ಯಗಳಲ್ಲೂ ಈ ರೀತಿಯ ಅಂತರ ಕಾಯ್ದುಕೊಳ್ಳುವಿಕೆ ವರ್ಕೌಟ್ ಆಗುತ್ತಿದೆ. ಪಾಂಡಿಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಕೂಡಾ ಇಂತಹದೊಂದು ಫೋಟೋವನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಾಕಿಕೊಂಡಿದ್ದಾರೆ. ಹಾಗೂ ಅಗತ್ಯ ವಸ್ತುಗಳ ಖರೀದಿಗೆ ಜನರು ಅಂಗಡಿಗಳಿಗೆ ಬಂದ ಸಂದರ್ಭದಲ್ಲಿ ಈ ರೀತಿಯಲ್ಲಿ ಅಂತರವನ್ನು ಕಾಯ್ದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.


from India & World News in Kannada | VK Polls https://ift.tt/2QZhY7l

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...