ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಮಾಧ್ಯಮಗಳ ಕ್ಯಾಮೆರಾಗಳಿಗೆ ನಿರ್ಬಂಧ ಹೇರಿರುವ ಆದೇಶವನ್ನು ವಾಪಸ್ ಪಡೆಯುವಂತೆ ಕಾಂಗ್ರೆಸ್ ಶಾಸಕ ಒತ್ತಾಯಿಸಿದ್ದಾರೆ. ಅಧಿವೇಶನಕ್ಕೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ನೀಡಿದ್ದಾರೆ. ಸ್ಪೀಕರ್ ಆದೇಶಕ್ಕೆ ಹಿರಿಯ ಪತ್ರಕರ್ತರು ಹಾಗೂ ಮಾಧ್ಯಮ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿವೆ. ವಿರೋಧ ಪಕ್ಷಗಳೂ ಸರ್ಕಾರದ ನಡೆಯನ್ನು ವಿರೋಧಿಸಿದ್ದು ಆದೇಶವನ್ನು ಹಿಂಪಡೆಯುವಂತೆ ಒತ್ತಾಯ ಮಾಡಿದ್ದಾರೆ. ಈ ನಡುವೆ ಶಾಸಕ ಪ್ರಿಯಾಂಕ್ ಖರ್ಗೆ ಸ್ಪೀಕರ್ ಅವರಿಗೆ ಪತ್ರವನ್ನು ಬರೆದಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯದ ರೂಪಕವಾಗಿರುವ ಮಾಧ್ಯಮಗಳನ್ನು ನಿರ್ಬಂಧಿಸಿ ಕಲಾಪ ನಡೆಸುತ್ತಿರುವುದು ಸಮಂಜಸವಲ್ಲ, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಸದನದಲ್ಲಿ ನಡೆಯುತ್ತಿರುವ ಕಾರ್ಯಕಲಾಪಗಳು ಜನರಿಗೆ ತಿಳಿಯಬೇಕಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳಿಗೆ ಸದನದೊಳಗಡೆ ಅವಕಾಶವನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.
from India & World News in Kannada | VK Polls https://ift.tt/39gFDXL