ಕೊರೊನಾ ವೈರಸ್ ಭೀತಿ; ಸೆಲ್ಫಿ ನಿರಾಕರಿಸಿದ ಕ್ಯಾಪ್ಟನ್ ಕೊಹ್ಲಿ

ಹೊಸದಿಲ್ಲಿ: ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೋವಿಡ್ 19 ಸೋಂಕು ಹರಡುವುದನ್ನು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಜನರಿಗೆ ಆದಷ್ಟು ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ. ಸೆಲೆಬ್ರಿಟಿಗಳಲ್ಲೂ ಸಾಮಾಜಿಕ ಸ್ಥಳಗಳಲ್ಲಿ ಜನರೊಂದಿಗೆ ಬೆರೆಯದಂತೆ ಸೂಚಿಸಲಾಗಿದೆ. ಅಷ್ಟೇ ಯಾಕೆ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಇದನ್ನು ಟೀಮ್ ಇಂಡಿಯಾ ನಾಯಕ ಅಚ್ಚುಕಟ್ಟಾಗಿ ಪಾಲಿಸಿದ್ದಾರೆ. ಇತ್ತೀಚೆಗಷ್ಟೇ ಯುವತಿಯೊಬ್ಬಾಕೆ ವಿಮಾನ ನಿಲ್ದಾಣದಲ್ಲಿ ವಿರಾಟ್ ಕೊಹ್ಲಿ ಬಳಿಕ ಸೆಲ್ಫಿ ಕ್ಲಿಕ್ಲಿಸಲು ಬಯಸಿದ್ದರು. ಆದರೆ ಇದಕ್ಕೆ ಟೀಮ್ ಇಂಡಿಯಾ ಕಪ್ತಾನ ಆಸ್ಪದ ನೀಡಲಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ವೇಳೆ ಈ ಘಟನೆ ನಡೆದಿದೆ ಎಂಬುದು ತಿಳಿದು ಬಂದಿದೆ. ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವದೆಲ್ಲೆಡೆಯ ಬಹುತೇಕ ಕ್ರೀಡಾಕೂಟಗಳನ್ನು ರದ್ದುಗೊಳಿಸಲಾಗಿದೆ. ಇದೇ ಕಾರಣದಿಂದಾಗಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿಯ ಅಂತಿಮ ಎರಡು ಪಂದ್ಯಗಳನ್ನು ರದ್ದುಗೊಳಿಸಲಾಗಿತ್ತು. ಈ ಮೊದಲು ಧರ್ಮಶಾಲಾದಲ್ಲಿ ನಡೆಯಬೇಕಾಗಿದ್ದ ಮೊದಲ ಏಕದಿನ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿತ್ತು. ಬಳಿಕ ಲಕ್ನೋ ಹಾಗೂ ಕೋಲ್ಕತಾ ಏಕದಿನ ಪಂದ್ಯಗಳನ್ನು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಸಲು ತೀರ್ಮಾನ ತೆಗೆದಕೊಂಡರೂ ಅಂತಿಮವಾಗಿ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಕೈಬಿಡಲಾಗಿತ್ತು. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯನ್ನು ಏಪ್ರಿಲ್ 15ರ ವರೆಗೆ ಅಮಾನತಿನಲ್ಲಿಡಲಾಗಿದೆ. ಈ ಮಧ್ಯೆ ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿರಾಟ್ ಕೊಹ್ಲಿ, ನಿರಂತರ ಅಂತರಾಳಗಳಲ್ಲಿ ಟ್ವೀಟ್ ಮಾಡುತ್ತಲೇ ಬಂದಿದ್ದಾರೆ. ಇದಕ್ಕೊಂದು ಸೇರ್ಪಡೆಯೆಂಬಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆಗೆ ಓಗೊಟ್ಟಿರುವ ವಿರಾಟ್ ಕೊಹ್ಲಿ, ಮಾರ್ಚ್ 22 ಭಾನುವಾರದಂದು ಜನತಾ ಕರ್ಫ್ಯೂ ಹೇರುವಂತೆ ಮನವಿ ಮಾಡಿದ್ದಾರೆ. ಈ ಮೂಲಕ ತಮ್ಮ ಬದ್ಧತೆಯನ್ನು ಮೆರೆದಿದ್ದಾರೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2U8cuJn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...