ಹೊಸದಿಲ್ಲಿ: ಪ್ರಧಾನಿ ಅವರು ಹಬ್ಬದ ಅಂಗವಾಗಿ ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ. ಬುಧವಾರ ಬೆಳಗ್ಗೆ ಕನ್ನಡದಲ್ಲಿಯೇ ಯುಗಾದಿ ಹಬ್ಬದ ಶುಭಾಶಯಗಳನ್ನು ಟ್ವೀಟ್ ಮಾಡಿದ್ದಾರೆ. ಯುಗಾದಿ ಹೊಸ ವರ್ಷ ಬಂದಿದೆ! ಈ ವರ್ಷ ಆಕಾಂಕ್ಷೆಗಳನ್ನು ಈಡೇರಿಸಲಿ, ವಿಪತ್ತುಗಳಿಂದ ಹೊರಬರಲು ಹೊಸ ಚೈತನ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪ್ರತಿಯೊಬ್ಬರಿಗೂ ಸಂತಸ ಮತ್ತು ಅದಕ್ಕಿಂತ ಮಿಗಿಲಾಗಿ ಉತ್ತಮ ಆರೋಗ್ಯದ ಆಶೀರ್ವಾದವಿರಲಿ ಎಂದಿದ್ದಾರೆ. ದೇಶ ಕೊರೊನಾ ವೈರಸ್ (ಕೊವಿಡ್-19) ಮಾರಕ ರೋಗವನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲೇ ನಾವು ಯುಗಾದಿ ಆಚರಿಸುತ್ತಿದ್ದೇವೆ. ಎಲ್ಲಾ ಹಬ್ಬಗಳ ಸಮಯದಂತೆ ಈ ವರ್ಷ ಪರಿಸ್ಥಿತಿ ಅನುಕೂಲವಾಗಿಲ್ಲ, ಆದರೂ ಪರಿಸ್ಥಿತಿಯನ್ನು ಎದುರಿಸಿ ಗೆಲ್ಲುವ ಶಕ್ತಿಯನ್ನು ನಮಗೆ ನೀಡಲಿದೆ. ಕೊರೋನಾ ವೈರಸ್ ವಿರುದ್ಧ ಧೈರ್ಯವಾಗಿ ಹೋರಾಡೋಣ ಎಂದಿದ್ದಾರೆ. ಕೊರೋನಾ ಸೋಂಕಿನ ನಿವಾರಣೆಯಲ್ಲಿ ನಿರತರಾಗಿರುವವರಿಗೆ ಸುರಕ್ಷತೆ, ಆರೋಗ್ಯವನ್ನು ಭಗವಂತ ನೀಡಲಿ ಎಂದು ಪ್ರಧಾನಿ ಕೇಳಿಕೊಂಡಿದ್ದಾರೆ. ಯುಗಾದಿ ಶುಭಾಶಯ ಕೋರಿದ ಅಮಿತ್ ಶಾ: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಕೂಡ ಕನ್ನಡದಲ್ಲಿಯೇ ಯುಗಾದಿ ಶುಭಾಶಸಯ ಕೋರಿದ್ದಾರೆ. ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ಹೊಸ ವರ್ಷ ಯುಗಾದಿ ಹಬ್ಬದ ಶುಭಾಶಯಗಳು.ಈ ಹೊಸ ವರ್ಷದಂದು, ಮನೆಯಲ್ಲೇ ಇರುವುದರ ಮೂಲಕ ಮತ್ತು ಸಾಮಾಜಿಕ ಅಂತರವನ್ನು ಅನುಸರಿಸುವುದರೊಂದಿಗೆ ಕೋವಿಡ್-19 ಮಹಾಮಾರಿಯನ್ನು ತೊಲಗಿಸುವ ಸಂಕಲ್ಪವನ್ನು ಮಾಡೋಣ. ನಿಮಗೆಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಂತೋಷ ಲಭಿಸಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
from India & World News in Kannada | VK Polls https://ift.tt/33Hm88U