ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಜೆ.ಕೆ ಕೃಷ್ಣಾರೆಡ್ಡಿ ರಾಜೀನಾಮೆ

ಬೆಂಗಳೂರು: ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಜೆ.ಕೆ ಕೃಷ್ಣಾರೆಡ್ಡಿಯವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಮಂಗಳವಾರ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿಯಾಗಿ ರಾಜೀನಾಮೆಯನ್ನು ಸಲ್ಲಿಸಿದರು. ಉಪಸಭಾಧ್ಯಕ್ಷರಾಗಿದ್ದ ಕೃಷ್ಣಾರೆಡ್ಡಿಯವರ ವಿರುದ್ಧ ಅವಿಶ್ವಾಸ ಮಂಡನೆ ಮಾಡಲು ಬಿಜೆಪಿ ತಯಾರಿ ನಡೆಸಿತ್ತು. ಆದರೆ ಅದಕ್ಕೆ ಅವಕಾಶವನ್ನು ನೀಡದ ಕಷ್ಣಾರೆಡ್ಡಿ ಸ್ವತಃ ತಾವೇ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರಾಗಿರುವ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ವಿಧಾನಸಭೆಯ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದರು. ವಿಧಾನಸಭೆಯ ಉಪಾಧ್ಯಕ್ಷರ ಸ್ಥಾನಕ್ಕೆ ಬಿಜೆಪಿಯ ಆನಂದ್‌ ಮಾಮನಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕೃಷ್ಣಾರೆಡ್ಡಿಯವರು ಸಮ್ಮಿಶ್ರ ಸರ್ಕಾರ ಪತನಗೊಂಡ ಬಳಿಕವೂ ಉಪಾಧ್ಯಕ್ಷರಾಗಿ ಮುಂದುವರಿಸಿದ್ದರು. ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲು ಮುಂದಾಗಿರದ ಕಾರಣಕ್ಕಾಗಿ ಅವರ ವಿರುದ್ಧ ಅವಿಶ್ವಾಸ ಮಂಡನೆ ಮಾಡಲು ಬಿಜೆಪಿ ತಯಾರಿ ನಡೆಸಿತ್ತು. ಆದರೆ ಇದೀಗ ಕೃಷ್ಣಾರೆಡ್ಡಿ ರಾಜೀನಾಮೆಯಿಂದ ಸಮಸ್ಯೆ ಬಗೆಹರಿದಿದೆ.


from India & World News in Kannada | VK Polls https://ift.tt/2xCz2Jc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...