ಹೊಸದಿಲ್ಲಿ: ಸೋಂಕು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಾರ್ಚ್ 22 ಭಾನುವಾರದಂದು ದೇಶದ ಜನತೆ ಸ್ವಯಂ ಘೋಷಿತ ಸಾರುವಂತೆ ಪ್ರಧಾನ ಮಂತ್ರಿ ಕರೆ ನೀಡಿದ್ದಾರೆ. ಗುರುವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾನುವಾರ ಬೆಳಗ್ಗೆ 7ರಿಂದ ರಾತ್ರಿ 9ರ ವರೆಗೆ ಸ್ವಯಂ ನಿರ್ಬಂಧ ಹೇರಿ ಮನೆಯಲ್ಲೇ ಕುಳಿತುಕೊಳ್ಳುವಂತೆ ಸೂಚಿಸಿದ್ದಾರೆ. ಅದೇ ಹೊತ್ತಿಗೆ ಮಾರ್ಚ್ 22ರಂದೇ ಸಂಜೆ 5 ಗಂಟೆಗೆ ಕೊರೊನಾ ವಿರುದ್ಧ ಹೋರಾಡುತ್ತಿರುವವರಿಗಾಗಿ ಮನೆಯ ಬಾಗಿಲಿನಲ್ಲಿ ಬಂದು ನಿಂತು ಕೈಚಪ್ಪಾಳೆ ತಟ್ಟುವಂತೆ ಸೂಚನೆ ನೀಡಿದ್ದಾರೆ. ಪ್ರಸ್ತುತ ಪ್ರಧಾನಿ ಮೋದಿ ಕರೆಗೆ ಕ್ರೀಡಾಪಟುಗಳು ಕೈಜೋಡಿಸಿದ್ದು, ಸಾರ್ವಜನಕರಿಗಲ್ಲಿ ಭಾನುವಾರದಂದು ಜನತಾ ಕರ್ಫ್ಯೂ ಮಾಡುವಂತೆ ಮನವಿ ಮಾಡಿದ್ದಾರೆ. ಭಾರತ ಕ್ರಿಕೆಟ್ ತಂಡದ ನಾಯಕ , ಕೋಚ್ ರವಿಶಾಸ್ತ್ರಿ ಸೇರಿದಂತೆ ಅನೇಕ ಕ್ರೀಡಾಪಟುಗಳು ಪ್ರಧಾನಿ ಮೋದಿ ಜನತಾ ಕರ್ಫ್ಯೂ ಯಶಸ್ವಿಯಾಗಿ ಜಾರಿಗೊಳಿಸಲು ಕರೆ ನೀಡಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ಟ್ವೀಟ್ನಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿರುವ ವೈದ್ಯಕೀಯ ವೃತ್ತಿಪರರನ್ನು ವಿಶೇಷವಾಗಿ ಉಲ್ಲೇಖಿಸಿದ್ದಾರೆ. ನಮ್ಮ ವೈಯಕ್ತಿಕ ಶುಚಿತ್ವ ಹಾಗೂ ನಮ್ಮ ಸುತ್ತುಮುತ್ತಲಿನ ಎಲ್ಲರೂ ವೈಯಕ್ತಿಕ ಶುಚಿತ್ವವನ್ನು ಕಾಪಾಡಿಕೊಳ್ಳುವ ಮೂಲಕ ಅವರನ್ನು ಬೆಂಬಲಿಸೋಣ ಎಂದು ಕರೆ ನೀಡಿದ್ದಾರೆ. ಮಾತು ಮುಂದುವರಿಸಿದ ವಿರಾಟ್ ಕೊಹ್ಲಿ, ಕೋವಿಡ್ 19 ಭೀತಿಯನ್ನು ಎದುರಿಸಲು ಜಾಗರೂಕರಾಗಿರಿ. ಜವಾಬ್ದಾರಿಯುತ ನಾಗರಿಕರಾಗಿ ಗೌರವಾನ್ವಿತ ಪ್ರಧಾನ ಮಂತ್ರಿ ಘೋಷಿಸಿದಂತೆ ನಮ್ಮ ಸುರಕ್ಷತೆಗಾಗಿ ಜಾರಿಗೆ ತಂದಿರುವ ಮಾರ್ಗದರ್ಶನಗಳಿಗೆ ಬದ್ಧವಾಗಿರಬೇಕು ಎಂದು ಹೇಳಿದ್ದಾರೆ. ಕೋಚ್ ರವಿಶಾಸ್ತ್ರಿ ಸಹ ಪ್ರಧಾನಿ ಮೋದಿ ಮಾತುಗಳನ್ನು ಪುನರುಚ್ಛಿಸಿದ್ದು ಮಾರ್ಚ್ 22 ಭಾನುವಾರದಂದು ಜನತಾ ಕರ್ಫ್ಯೂ ಆಚರಿಸುವಂತೆ ಸೂಚಿಸಿದ್ದಾರೆ. ಇದೇ ವೇಳೆಯಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಏನು ಮಾಡಬೇಕು ಏನು ಮಾಡಬಾರದು ಎಂಬುದನ್ನು ಇನ್ಫೋಗ್ರಾಫಿಕ್ಸ್ ಮೂಲಕ ತಿಳಿಸಿದ್ದಾರೆ. ಎಡಗೈ ಬ್ಯಾಟ್ಸ್ಮನ್ ಶಿಖರ್ ಧವನ್ ಕೂಡಾ ದೇಶದ ನಿವಾಸಿಗಳಲ್ಲಿ ಮನೆಯಲ್ಲಿ ಇರುವಂತೆ ಸೂಚಿಸಿದ್ದಾರೆ. ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ರವಿಚಂದ್ರನ್ ಅಶ್ವಿನ್, ಕುಸ್ತಿಪಟು ಯೋಗೇಶ್ವರ್ ದತ್ ಸೇರಿದಂತೆ ಪ್ರಮುಖರು ಸ್ವಯಂ ಪ್ರೇರಿತವಾಗಿ ಜನತಾ ಕರ್ಫ್ಯೂ ಹೇರುವಂತೆ ಸೂಚನೆ ನೀಡಿದ್ದಾರೆ. ರವಿಚಂದ್ರನ್ ಅಶ್ವಿನ್ ಹರ್ಭಜನ್ ಸಿಂಗ್ ಯೋಗೇಶ್ವರ್ ದತ್ ರಾಣಿ ರಾಂಪಾಲ್
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/33vL1UM