ಕೊರೊನಾ ಭೀತಿ: ಧವಳಗಿರಿ ನಿವಾಸದಲ್ಲಿ ಬಿಎಸ್‌ವೈ ತುರ್ತು ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗ ಅಗತ್ಯ ಕ್ರಮಗಳ ಕುರಿತಾಗಿ ಚರ್ಚೆ ನಡೆಸಲು ಬೆಂಗಳೂರಿನ ಡಾಲರ್ಸ್‌ ಕಾಲೊನಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ನಿವಾಸ ಧವಳಗಿರಿಯಲ್ಲಿ ತುರ್ತು ಸಭೆ ನಡೆಯುತ್ತಿದೆ. ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸುತ್ತಿದ್ದಾರೆ. ಡಿಸಿಎಂ ಅಶ್ವಥ್ ನಾರಾಯಣ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಹಾಗೂ ಡಿಜಿ, ಐಜಿಪಿ ಪ್ರವೀಣ್ ಸೂದ್ ಸಭೆಯಲ್ಲಿ ಭಾಗಿಯಾಗಿದ್ದಾರೆ. ಭಾನುವಾರ ಬೆಳಗ್ಗೆ ಒಂದು ಸುತ್ತಿನ ಸಭೆಯನ್ನು ನಡೆಸಿದ ಸಿಎಂ ಯಡಿಯೂರಪ್ಪ ಕೆಲವೊಂದು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ವಿಕ್ಟೋರಿಯಾ ಆಸ್ಪತ್ರೆಯನ್ನು ಪರಿವರ್ತನೆ ಮಾಡುವುದು ಹಾಗೂ ಗಡಿಗಳನ್ನು ಬಂದ್‌ ಮಾಡಲು ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಹಾಗೂ ಡಿಜಿ & ಐಜಿಪಿ ಪ್ರವೀಣ್ ಸೂದ್‌ ಜೊತೆಗೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಸಿಎಂ ತುರ್ತು ಸಭೆಯಲ್ಲಿ ಕೈಗೊಂಡಿರುವ ನಿರ್ಧಾರಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳು ಹಾಗೂ ಅಡೆತಡೆಗಳ ಕುರಿತಾಗಿಯೂ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಮಾರ್ಚ್22 ರ ತನಕ 21 ಕೋವಿಡ್‌-19 ಪ್ರಕರಣಗಳು ದೃಢಪಟ್ಟಿವೆ. ಭಾನುವಾರ ದುಬೈನಿಂದ ಬಂದ ಪ್ರಯಾಣಿಕರ ಪೈಕಿ ಆರು ಜನರಲ್ಲಿ ಕೋವಿಡ್‌ -19 ಸೋಂಕು ಲಕ್ಷಣಗಳು ಗೋಚರಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೆಚ್ಚಿನ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿಲಾಗಿದೆ. ಈಗಾಗಲೇ ರಾಜಸ್ಥಾನ ಹಾಗೂ ಪಂಜಾಬ್‌ನಲ್ಲಿ ಮಾರ್ಚ್ 31 ರರೆಗೂ ಸಂಪೂರ್ಣ ಸ್ತಬ್ಧಗೊಳಿಸಲು ನಿರ್ಧರಿಸಲಾಗಿದ್ದು ಕರ್ನಾಟಕದಲ್ಲೂ ಇಂತಹ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಒತ್ತಾಯಿಸಿದೆ.


from India & World News in Kannada | VK Polls https://ift.tt/2UrV0qb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...