ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ಡೌನ್ ಇರುವುದರಿಂದ ಬಡವರಿಗೆ ಅನುಕೂಲವಾಗಲಿ ಎಂದು ಇಂದಿರಾ ಕ್ಯಾಂಟೀನ್ನಲ್ಲಿ ಊಟ, ತಿಂಡಿ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು. ಆದರೆ ಇದೀಗ ದಿಢೀರ್ ಆಗಿ ಇಂದಿರಾ ಕ್ಯಾಂಟೀನನ್ನು ತೆರೆಯದಿರುವುದಕ್ಕೆ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈ ಕುರಿತಾಗಿ ಅಧಿಕೃತ ಹೇಳಿಕೆ ನೀಡಿದ್ದು, ನೂಕುನುಗ್ಗಲು ಆಗುವ ಕಾರಣಕ್ಕಾಗಿ ಇಂದಿರಾ ಕ್ಯಾಂಟೀನ್ ತೆರೆಯದೇ ಇರಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ವೈ, ಜನರು ಯುಗಾದಿ ಹಬ್ಬವನ್ನು ಮನೆಯಲ್ಲೇ ಆಚರಿಸಿ, ಆಡಂಬರದ ಹಬ್ಬ ಆಚರಣೆ ಮಾಡುವುದು ಬೇಡ ಎಂದು ಮನವಿ ಮಾಡಿಕೊಂಡರು. ಯುಗಾದಿ ಹಬ್ಬಕ್ಕಾಗಿ ವಸ್ತುಗಳನ್ನು ಖರೀದಿ ಮಾಡುವುದಕ್ಕಮಾರ್ಕೆಟ್ಗಳಿಗೆ ಹೋಗುವುದು ಬೇಡ ಎಂದು ವಿನಂತಿ ಮಾಡಿದ್ದಾರೆ. ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾಲು, ಹಣ್ಣು, ತರಕಾರಿ ಪೂರೈಕೆಗೆ ಪೊಲೀಸರು ಅಡ್ಡಿ ಪಡಿಸಬಾರದು, ರಾಜ್ಯದಲ್ಲಿ ಕರ್ಪ್ಯೂ ವಾತಾವರಣ ಇರುವುದರಿಂದ ಜನರು ಕಾರಿನಲ್ಲಿ, ದ್ವಿಚಕ್ರ ವಾಹನದಲ್ಲಿ ಓಡಾಟನಡೆಸಬಾರದು. ಒಂದು ವೇಳೆ ವಿನಾಕಾರಣ ಮನೆಯಿಂದ ಹೊರಗಡೆ ಬಂದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು. ಕೆಲವೊಂದು ಹೋಟೆಲ್ ಕಿಚನ್ಗಳಿಂದ ಪಾರ್ಸೆಲ್ ತರಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಜನರು ಕೊರೊನಾ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಸೂಚನೆಯಂತೆ ಎಲ್ಲಾ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದು ಜನರು ಸಹಕಾರ ನೀಡಬೇಕು ಎಂದು ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.
from India & World News in Kannada | VK Polls https://ift.tt/3dsaa7k